ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲ್ಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ, ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು.