<p><strong>ಶಿವಮೊಗ್ಗ:</strong> ಇಲ್ಲಿನ ಮೆಗ್ಗಾನ್ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಮೆಗ್ಗಾನ್ ಬಡವರಿಗೆ ನೆರವಾಗುವ ಆಸ್ಪತ್ರೆ. ಇಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ. ರೋಗಿಗಳ ಜೊತೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ತೋರಿ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೆಗ್ಗಾನ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಇದ್ದಾರೆ. ತರಬೇತಿ ಹಂತದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳು ಇದ್ದಾರೆ. ಹೌಸ್ ಕೀಪಿಂಗ್ ವಿಭಾಗದಲ್ಲೂ ಗುತ್ತಿಗೆ ಕೆಲಸಗಾರರಿದ್ದಾರೆ. ಅವರಿಗೆ ಯಾವುದೇ ಮುಖ್ಯ ಜವಾಬ್ದಾರಿ ಇಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ದೂರಿದರು.</p>.<p>ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಇಲ್ಲ. ಸಾರ್ವಜನಿಕರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಭಯ ಪಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಅಸಮರ್ಪಕವಾಗಿರುವ ವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕದಂಬ ಕನ್ನಡ ವೇದಿಕೆಯ ರಾಜ್ಯಾಧ್ಯಕ್ಷ ವಿಶ್ವನಾಥಗೌಡ, ನವೀನ್, ಲಕ್ಷ್ಮೀಶ, ಸತೀಶ್, ಸಂತೋಷ್, ಶಿವಣ್ಣ, ಮಂಜುನಾಯ್ಕ, ಗಂಗಾಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಇಲ್ಲಿನ ಮೆಗ್ಗಾನ್ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಮೆಗ್ಗಾನ್ ಬಡವರಿಗೆ ನೆರವಾಗುವ ಆಸ್ಪತ್ರೆ. ಇಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ. ರೋಗಿಗಳ ಜೊತೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ತೋರಿ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮೆಗ್ಗಾನ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಇದ್ದಾರೆ. ತರಬೇತಿ ಹಂತದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳು ಇದ್ದಾರೆ. ಹೌಸ್ ಕೀಪಿಂಗ್ ವಿಭಾಗದಲ್ಲೂ ಗುತ್ತಿಗೆ ಕೆಲಸಗಾರರಿದ್ದಾರೆ. ಅವರಿಗೆ ಯಾವುದೇ ಮುಖ್ಯ ಜವಾಬ್ದಾರಿ ಇಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ದೂರಿದರು.</p>.<p>ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಇಲ್ಲ. ಸಾರ್ವಜನಿಕರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಭಯ ಪಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಅಸಮರ್ಪಕವಾಗಿರುವ ವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಕದಂಬ ಕನ್ನಡ ವೇದಿಕೆಯ ರಾಜ್ಯಾಧ್ಯಕ್ಷ ವಿಶ್ವನಾಥಗೌಡ, ನವೀನ್, ಲಕ್ಷ್ಮೀಶ, ಸತೀಶ್, ಸಂತೋಷ್, ಶಿವಣ್ಣ, ಮಂಜುನಾಯ್ಕ, ಗಂಗಾಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>