<p><strong>ಸಾಗರ:</strong> ಕೋವಿಡ್ ಕುರಿತು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಈ ಬಗ್ಗೆ ಆತಂಕದ ಅಗತ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಮತ್ತು ಡೆಂಗಿ ನಿಯಂತ್ರಣ ಕುರಿತು ಬುಧವಾರ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಕೆಲವೆಡೆ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದರೂ ಹಿಂದಿನ ವರ್ಷಗಳಂತೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿಲ್ಲ. ಆದಾಗ್ಯೂ ಮುಂಜಾಗ್ರತೆಯಿಂದ ಇದ್ದು ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರತಿಯೊಂದು ತಾಲ್ಲೂಕಿನಲ್ಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ಸೌಲಭ್ಯ ಕಲ್ಪಿಸುವಂತೆ ಸರ್ಕಾರ ಸೂಚಿಸಿದೆ. ಮುಂದೆ ಬರಬಹುದಾದ ತುರ್ತು ಆರೋಗ್ಯ ಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕು’ ಎಂದು ತಿಳಿಸಿದರು.</p>.<p>‘ಮಕ್ಕಳು, ಗರ್ಭಿಣಿಯರ ಆರೋಗ್ಯದ ಮೇಲೆ ವೈದ್ಯರು ಹೆಚ್ಚಿನ ನಿಗಾ ವಹಿಸಬೇಕು. ಶೀತ, ಜ್ವರ ಕಾಣಿಸಿಕೊಂಡ ಮಾತ್ರಕ್ಕೆ ಕೋವಿಡ್ ಸೋಂಕು ತಗುಲಿದೆ ಎನ್ನಲಾಗದು. ಆದರೆ ತಪಾಸಣೆ ಮಾಡಿಸುವುದರಲ್ಲಿ ತಪ್ಪಿಲ್ಲ’ ಎಂದರು.</p>.<p>ಇಲ್ಲಿನ ಸರ್ಕಾರಿ ಆಸ್ಪತ್ರೆಯ ಅಂಬುಲೆನ್ಸ್ಗೆ ಮೂವರು ಚಾಲಕರಿದ್ದಾರೆ. ಮತ್ತೋರ್ವ ಚಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಿ ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗೆ ಸೂಚಿಸಿದರು.</p>.<p>ಡೆಂಗಿ ಜ್ವರ ತಡೆಯಲು ನಗರವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಯಾವುದೆ ಪ್ರದೇಶದಲ್ಲಿ ಮಳೆಯ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗೆ ತಿಳಿಸಿದರು.</p>.<p>ರಾಜ್ಯ ಸರ್ಕಾರ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲೂ ಕಿಮೋಥೆರಫಿ ಘಟಕ ಆರಂಭಿಸುವ ಚಿಂತನೆ ನಡೆಸಿದೆ. ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರ ಇರುವಂತೆ ನೋಡಿಕೊಳ್ಳಲಾಗುವುದು. ಈ ಕೇಂದ್ರಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಹೆಚ್ಚಿನ ಔಷಧಿಗಳು ಲಭ್ಯವಾಗಬೇಕು ಎಂದು ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಉಪವಿಭಾಗಾಧಿಕಾರಿ ಜಗದೀಶ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಡಾ.ಕೆ.ಪರಪ್ಪ, ಡಾ.ನಾಗರಾಜ ನಾಯ್ಕ, ಡಾ.ಹರ್ಷವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಕೋವಿಡ್ ಕುರಿತು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಈ ಬಗ್ಗೆ ಆತಂಕದ ಅಗತ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಮತ್ತು ಡೆಂಗಿ ನಿಯಂತ್ರಣ ಕುರಿತು ಬುಧವಾರ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಕೆಲವೆಡೆ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದರೂ ಹಿಂದಿನ ವರ್ಷಗಳಂತೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿಲ್ಲ. ಆದಾಗ್ಯೂ ಮುಂಜಾಗ್ರತೆಯಿಂದ ಇದ್ದು ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.</p>.<p>‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಪ್ರತಿಯೊಂದು ತಾಲ್ಲೂಕಿನಲ್ಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ಸೌಲಭ್ಯ ಕಲ್ಪಿಸುವಂತೆ ಸರ್ಕಾರ ಸೂಚಿಸಿದೆ. ಮುಂದೆ ಬರಬಹುದಾದ ತುರ್ತು ಆರೋಗ್ಯ ಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕು’ ಎಂದು ತಿಳಿಸಿದರು.</p>.<p>‘ಮಕ್ಕಳು, ಗರ್ಭಿಣಿಯರ ಆರೋಗ್ಯದ ಮೇಲೆ ವೈದ್ಯರು ಹೆಚ್ಚಿನ ನಿಗಾ ವಹಿಸಬೇಕು. ಶೀತ, ಜ್ವರ ಕಾಣಿಸಿಕೊಂಡ ಮಾತ್ರಕ್ಕೆ ಕೋವಿಡ್ ಸೋಂಕು ತಗುಲಿದೆ ಎನ್ನಲಾಗದು. ಆದರೆ ತಪಾಸಣೆ ಮಾಡಿಸುವುದರಲ್ಲಿ ತಪ್ಪಿಲ್ಲ’ ಎಂದರು.</p>.<p>ಇಲ್ಲಿನ ಸರ್ಕಾರಿ ಆಸ್ಪತ್ರೆಯ ಅಂಬುಲೆನ್ಸ್ಗೆ ಮೂವರು ಚಾಲಕರಿದ್ದಾರೆ. ಮತ್ತೋರ್ವ ಚಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಿ ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗೆ ಸೂಚಿಸಿದರು.</p>.<p>ಡೆಂಗಿ ಜ್ವರ ತಡೆಯಲು ನಗರವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಯಾವುದೆ ಪ್ರದೇಶದಲ್ಲಿ ಮಳೆಯ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗೆ ತಿಳಿಸಿದರು.</p>.<p>ರಾಜ್ಯ ಸರ್ಕಾರ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲೂ ಕಿಮೋಥೆರಫಿ ಘಟಕ ಆರಂಭಿಸುವ ಚಿಂತನೆ ನಡೆಸಿದೆ. ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರ ಇರುವಂತೆ ನೋಡಿಕೊಳ್ಳಲಾಗುವುದು. ಈ ಕೇಂದ್ರಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಹೆಚ್ಚಿನ ಔಷಧಿಗಳು ಲಭ್ಯವಾಗಬೇಕು ಎಂದು ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಉಪವಿಭಾಗಾಧಿಕಾರಿ ಜಗದೀಶ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಡಾ.ಕೆ.ಪರಪ್ಪ, ಡಾ.ನಾಗರಾಜ ನಾಯ್ಕ, ಡಾ.ಹರ್ಷವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>