ನಮಗೂ ಘಟನೆಯಿಂದ ಆಘಾತವಾಗಿದೆ. ಶಾಸಕರ ಜೊತೆ ಚರ್ಚಿಸಿ ಕೂಡಲೇ ರಸ್ತೆ ನಿರ್ಮಿಸಿಕೊಡಲಾಗುವುದು. ಈಗಾಗಲೇ ಉಪ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲಿನ ಕುಟುಂಬಗಳಿಗೆ ಅಗತ್ಯ ಸೌಕರ್ಯ ಒದಗಿಸಲಾಗುವುದು.
– ವಸಂತಿ ರಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ
*
ಅಲ್ಲಿನ ಜನರಿಗೆ ರಸ್ತೆ ನಿರ್ಮಿಸಿಕೊಡುವಂತೆ ಅನೇಕ ಬಾರಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು.
– ಎನ್. ರಾಜು, ಪಟ್ಟಣ ಪಂಚಾಯಿತಿ ವಿರೋಧ ಪಕ್ಷದ ನಾಯಕ