ಶಿವಮೊಗ್ಗ:ಉತ್ತರ ಕರ್ನಾಟಕದ ನೆರೆ ಹಾವಳಿ ಪ್ರದೇಶಗಳಲ್ಲಿ ಅ.21ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುವುದು. ನಂತರ ಪ್ರಧಾನಿ ಮುಂದೆ ಹಾನಿಯ ವಾಸ್ತವ ಸ್ಥಿತಿಗತಿ ಮನವರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿಕಾರಿಪುರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದ ಜನರ ಸಂಕಷ್ಟಗಳಿಗೆ ಸ್ಪಂದಿಸುವರು. ಹೆಚ್ವಿನ ನೆರವು ನೀಡುವರು ಎಂದರು.
ಜಾತಿಗಣತಿ ಅಂಗೀಕರಿಸುವ ಕುರಿತು ಕೇಳಿದ ಪ್ರಶ್ನೆಗೆ ನೋಡುತ್ತೇನೆ ಎಂದಷ್ಟೇ ಪ್ರತಿಕ್ರಿಯಿಸಿದರು.
ಬೆಳಿಗ್ಗೆ ಶಿಕಾರಿಪುರ ಮನೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.