ನಗರದಲ್ಲಿ ಅವರು ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟದಲ್ಲಿ ಯುವಕರು ಹಾಗೂ ಹಳಬರಿಗೆ ಸಮಾನ ಅವಕಾಶ ಸಿಗುವ ಸಾಧ್ಯತೆ ಇದೆ. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷದ ವರಿಷ್ಠರು ಕೃಷ್ಣನ ತಂತ್ರಗಾರಿಕೆ ಮಾಡುತ್ತಿದ್ದಾರೆ. ಎರಡು ವರ್ಷಗಳ ನಂತರ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟಬಹುಮತ ದೊರಕಿಸುವ ಗುರಿ ಇದೆ. ಯಾವುದೇ ಲಾಭಿ, ಒತ್ತಡಕ್ಕೆ ಮಣೆ ಹಾಕುವುದಿಲ್ಲ ಎಂದರು.