<p><strong>ಶಿವಮೊಗ್ಗ:</strong> ಮಹಾತ್ಮ ಗಾಂಧೀಜಿ ರಾಮರಾಜ್ಯದ ಆಶಯ ಹೊಂದಿದ್ದರು. ಶ್ರೀರಾಮನನ್ನು ಹೃದಯದಲ್ಲಿ ಇಟ್ಟುಕೊಂಡಿದ್ದರು. ಅದೇ ಕಾರಣಕ್ಕೆ ನರೇಗಾಕ್ಕೆ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ವಿಬಿ–ಜಿ ರಾಮ್-ಜೀ ಯೋಜನೆ ಎಂದು ಹೆಸರು ಬದಲಾಯಿಸಲಾಗಿದೆ. ರಾಜಕೀಯ ಕಾರಣಕ್ಕಾಗಿ ಇದರಲ್ಲೂ ಕಾಂಗ್ರೆಸ್ನವರು ಹುಳುಕು ಹುಡುಕುತ್ತಾ ಗೊಂದಲ ಸೃಷ್ಟಿಸುವುದು ಬೇಡ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಸಲಹೆ ನೀಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಬಿ–ಜಿ ರಾಮ್ ಜೀ ಯೋಜನೆಗೆ ಶೇ 40ರಷ್ಟು ಅನುದಾನ ರಾಜ್ಯ ಸರ್ಕಾರ ಕೊಡಬೇಕಿದೆ. ರಾಮನ ಹೆಸರಿನ ಯೋಜನೆಗೆ ತಾವೇಕೆ ಪಾಲು ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ನವರು ವಿರೋಧಿಸುತ್ತಿದ್ದಾರೆ ಎಂದು ದೂರಿದರು.</p>.<p>ನರೇಗಾ ಯೋಜನೆಯಲ್ಲಿನ ದೋಷಗಳನ್ನು ಸರಿಪಡಿಸಿ ಅದನ್ನು ಬರೀ ಕೂಲಿಗಾಗಿ ಯೋಜನೆಯಾಗಿ ಮುಂದುವರೆಸದೇ ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸುವ ಯೋಜನೆ ಹೊಂದಲಾಗಿದೆ. ಗ್ರಾಮೀಣರಿಗೆ ಶಾಶ್ವತವಾಗಿ ಬದುಕಿನ ಆಸರೆ ಕಲ್ಪಿಸುವ ಅವಕಾಶಗಳನ್ನು ಒದಗಿಸಲಾಗಿದೆ. ಯೋಜನೆ ಗ್ರಾಮೀಣ ಮೂಲ ಸೌಕರ್ಯ ಮತ್ತು ಜೀವನ ಸುಧಾರಣೆಯ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, 2047ರ ವೇಳೆಗೆ ವಿಕಸಿತ ಭಾರತದ ಆಶಯಕ್ಕೆ ಗ್ರಾಮೀಣರನ್ನು ಸಜ್ಜುಗೊಳಿಸಲಿದೆ ಎಂದು ತಿಳಿಸಿದರು.</p>.<p>ಈ ಹಿಂದೆ ನರೇಗಾ ಕಾಮಗಾರಿ ಮುಗಿಯಿತು ಎಂದು ಬಿಲ್ ಮಾಡಿದ್ದೇ ಸಾಧನೆಯಾಗಿತ್ತೇ ಹೊರತು ಗ್ರಾಮಗಳ ಚಿತ್ರಣ ಬದಲಾಗಲಿಲ್ಲ. ಇಂದಿರಾಗಾಂಧಿ ಅವರು ಗರಿಬೀ ಹಠಾವೋ ಕಾರ್ಯಕ್ರಮ ಜಾರಿಗೆ ತಂದಿದ್ದರೂ ಇನ್ನೂ ತನಕ ಯಾವುದೇ ಪ್ರಯೋಜನವಾಗಲಿಲ್ಲ. ನರೇಗಾ ಯೋಜನೆ ಕೇವಲ ಕೂಲಿ ನೀಡುವುದಕ್ಕೆ ಸೀಮಿತವಾಗಿದ್ದು, ಅದರಿಂದ ಬಡವರಿಗೆ, ಕೂಲಿಕಾರರಿಗೆ ಏನೂ ಪ್ರಯೋಜನವಾಗಲಿಲ್ಲ ಎಂದು ಟೀಕಿಸಿದರು.</p>.<p>ಈ ಹಿಂದೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ನರೇಗಾ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದ ಪ್ರಮಾಣ ಕ್ರಮವಾಗಿ ಶೇ 60, ಶೇ40 ಇರಬೇಕು ಎಂದು ಹೇಳಿದ್ದರು. ಆಗ, ಕಾಂಗ್ರೆಸ್ನವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ ಚನ್ನಬಸಪ್ಪ, ಈಗ ವಿರೋಧಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ರಾಮ್-ಜೀ ಯೋಜನೆಯನ್ನು ವಿವಿಧ ಸೇವೆಗಳಿಗೆ ವಿಸ್ತರಣೆ ಮಾಡಲಾಗಿದೆ. ಕಾಂಗ್ರೆಸ್ ಇದರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು. ಇದು ಕಾಂಗ್ರೆಸ್ ಅಧೋಗತಿಗೆ ಕಾರಣವಾಗಲಿದೆ ಎಂದರು.<br><br>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ನಗರ ಘಟಕದ ಅಧ್ಯಕ್ಷ ಮೋಹನ್ರೆಡ್ಡಿ, ಪ್ರಮುಖರಾದ ದೀನ್ದಯಾಳ್, ಮಂಜುನಾಥ್ ನವುಲೆ, ಚಂದ್ರಶೇಖರ್, ಶರತ್ ಕಲ್ಯಾಣಿ ಇದ್ದರು.</p>.<p><strong>ಈಶ್ವರಪ್ಪನವರಿಗೆ ಪಕ್ಷ ಬಿಡಿ ಎಂದು ಹೇಳಿದ್ದು ಯಾರು ?</strong></p><p>‘ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ವೈಚಾರಿಕವಾಗಿ ಅವರು ಈಗಲೂ ಪಕ್ಷದ ಸಿದ್ಧಾಂತಕ್ಕಿಂತ ಬೇರೆಯಲ್ಲ. ನಾನು ಅವರನ್ನು ಪಕ್ಷಕ್ಕೆ ಕರೆದು ಸೇರಿಸಿಕೊಳ್ಳುವಷ್ಟು ದೊಡ್ಡವನಲ್ಲ. ಅದಕ್ಕೆ ಬಿಜೆಪಿಯಲ್ಲಿ ಹಿರಿಯರು ಇದ್ದಾರೆ’ ಎಂದು ಶಾಸಕ ಚನ್ನಬಸಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ‘ಬಿಜೆಪಿ ಎಲ್ಲರನ್ನೂ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರನ್ನೂ ಒಳಗೊಂಡೇ ಮುನ್ನಡೆಯುತ್ತದೆ. ಅಷ್ಟಕ್ಕೂ ಈಶ್ವರಪ್ಪನವರಿಗೆ ಪಕ್ಷಬಿಡಿ ಎಂದು ಹೇಳಿದವರು ಯಾರು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮಹಾತ್ಮ ಗಾಂಧೀಜಿ ರಾಮರಾಜ್ಯದ ಆಶಯ ಹೊಂದಿದ್ದರು. ಶ್ರೀರಾಮನನ್ನು ಹೃದಯದಲ್ಲಿ ಇಟ್ಟುಕೊಂಡಿದ್ದರು. ಅದೇ ಕಾರಣಕ್ಕೆ ನರೇಗಾಕ್ಕೆ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ವಿಬಿ–ಜಿ ರಾಮ್-ಜೀ ಯೋಜನೆ ಎಂದು ಹೆಸರು ಬದಲಾಯಿಸಲಾಗಿದೆ. ರಾಜಕೀಯ ಕಾರಣಕ್ಕಾಗಿ ಇದರಲ್ಲೂ ಕಾಂಗ್ರೆಸ್ನವರು ಹುಳುಕು ಹುಡುಕುತ್ತಾ ಗೊಂದಲ ಸೃಷ್ಟಿಸುವುದು ಬೇಡ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಸಲಹೆ ನೀಡಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಬಿ–ಜಿ ರಾಮ್ ಜೀ ಯೋಜನೆಗೆ ಶೇ 40ರಷ್ಟು ಅನುದಾನ ರಾಜ್ಯ ಸರ್ಕಾರ ಕೊಡಬೇಕಿದೆ. ರಾಮನ ಹೆಸರಿನ ಯೋಜನೆಗೆ ತಾವೇಕೆ ಪಾಲು ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ನವರು ವಿರೋಧಿಸುತ್ತಿದ್ದಾರೆ ಎಂದು ದೂರಿದರು.</p>.<p>ನರೇಗಾ ಯೋಜನೆಯಲ್ಲಿನ ದೋಷಗಳನ್ನು ಸರಿಪಡಿಸಿ ಅದನ್ನು ಬರೀ ಕೂಲಿಗಾಗಿ ಯೋಜನೆಯಾಗಿ ಮುಂದುವರೆಸದೇ ಗ್ರಾಮೀಣ ಭಾರತದ ಚಿತ್ರಣವನ್ನು ಬದಲಾಯಿಸುವ ಯೋಜನೆ ಹೊಂದಲಾಗಿದೆ. ಗ್ರಾಮೀಣರಿಗೆ ಶಾಶ್ವತವಾಗಿ ಬದುಕಿನ ಆಸರೆ ಕಲ್ಪಿಸುವ ಅವಕಾಶಗಳನ್ನು ಒದಗಿಸಲಾಗಿದೆ. ಯೋಜನೆ ಗ್ರಾಮೀಣ ಮೂಲ ಸೌಕರ್ಯ ಮತ್ತು ಜೀವನ ಸುಧಾರಣೆಯ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, 2047ರ ವೇಳೆಗೆ ವಿಕಸಿತ ಭಾರತದ ಆಶಯಕ್ಕೆ ಗ್ರಾಮೀಣರನ್ನು ಸಜ್ಜುಗೊಳಿಸಲಿದೆ ಎಂದು ತಿಳಿಸಿದರು.</p>.<p>ಈ ಹಿಂದೆ ನರೇಗಾ ಕಾಮಗಾರಿ ಮುಗಿಯಿತು ಎಂದು ಬಿಲ್ ಮಾಡಿದ್ದೇ ಸಾಧನೆಯಾಗಿತ್ತೇ ಹೊರತು ಗ್ರಾಮಗಳ ಚಿತ್ರಣ ಬದಲಾಗಲಿಲ್ಲ. ಇಂದಿರಾಗಾಂಧಿ ಅವರು ಗರಿಬೀ ಹಠಾವೋ ಕಾರ್ಯಕ್ರಮ ಜಾರಿಗೆ ತಂದಿದ್ದರೂ ಇನ್ನೂ ತನಕ ಯಾವುದೇ ಪ್ರಯೋಜನವಾಗಲಿಲ್ಲ. ನರೇಗಾ ಯೋಜನೆ ಕೇವಲ ಕೂಲಿ ನೀಡುವುದಕ್ಕೆ ಸೀಮಿತವಾಗಿದ್ದು, ಅದರಿಂದ ಬಡವರಿಗೆ, ಕೂಲಿಕಾರರಿಗೆ ಏನೂ ಪ್ರಯೋಜನವಾಗಲಿಲ್ಲ ಎಂದು ಟೀಕಿಸಿದರು.</p>.<p>ಈ ಹಿಂದೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ನರೇಗಾ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದ ಪ್ರಮಾಣ ಕ್ರಮವಾಗಿ ಶೇ 60, ಶೇ40 ಇರಬೇಕು ಎಂದು ಹೇಳಿದ್ದರು. ಆಗ, ಕಾಂಗ್ರೆಸ್ನವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ ಚನ್ನಬಸಪ್ಪ, ಈಗ ವಿರೋಧಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ರಾಮ್-ಜೀ ಯೋಜನೆಯನ್ನು ವಿವಿಧ ಸೇವೆಗಳಿಗೆ ವಿಸ್ತರಣೆ ಮಾಡಲಾಗಿದೆ. ಕಾಂಗ್ರೆಸ್ ಇದರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು. ಇದು ಕಾಂಗ್ರೆಸ್ ಅಧೋಗತಿಗೆ ಕಾರಣವಾಗಲಿದೆ ಎಂದರು.<br><br>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ನಗರ ಘಟಕದ ಅಧ್ಯಕ್ಷ ಮೋಹನ್ರೆಡ್ಡಿ, ಪ್ರಮುಖರಾದ ದೀನ್ದಯಾಳ್, ಮಂಜುನಾಥ್ ನವುಲೆ, ಚಂದ್ರಶೇಖರ್, ಶರತ್ ಕಲ್ಯಾಣಿ ಇದ್ದರು.</p>.<p><strong>ಈಶ್ವರಪ್ಪನವರಿಗೆ ಪಕ್ಷ ಬಿಡಿ ಎಂದು ಹೇಳಿದ್ದು ಯಾರು ?</strong></p><p>‘ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ವೈಚಾರಿಕವಾಗಿ ಅವರು ಈಗಲೂ ಪಕ್ಷದ ಸಿದ್ಧಾಂತಕ್ಕಿಂತ ಬೇರೆಯಲ್ಲ. ನಾನು ಅವರನ್ನು ಪಕ್ಷಕ್ಕೆ ಕರೆದು ಸೇರಿಸಿಕೊಳ್ಳುವಷ್ಟು ದೊಡ್ಡವನಲ್ಲ. ಅದಕ್ಕೆ ಬಿಜೆಪಿಯಲ್ಲಿ ಹಿರಿಯರು ಇದ್ದಾರೆ’ ಎಂದು ಶಾಸಕ ಚನ್ನಬಸಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ‘ಬಿಜೆಪಿ ಎಲ್ಲರನ್ನೂ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರನ್ನೂ ಒಳಗೊಂಡೇ ಮುನ್ನಡೆಯುತ್ತದೆ. ಅಷ್ಟಕ್ಕೂ ಈಶ್ವರಪ್ಪನವರಿಗೆ ಪಕ್ಷಬಿಡಿ ಎಂದು ಹೇಳಿದವರು ಯಾರು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>