<p>ನ್ಯಾಮತಿ: ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಂಬಂಧಿಕರು ಹಾಗೂ ತಾಲ್ಲೂಕಿನ ಫಲವನಹಳ್ಳಿ ಗ್ರಾಮಸ್ಥರು ಇಲ್ಲಿನ ಸಮುದಾಯ ಆಸ್ಪತ್ರೆಗೆ ಶುಕ್ರವಾರ ಮುತ್ತಿಗೆ ಹಾಕಿದರು.</p>.<p>ಫಲವನಹಳ್ಳಿ ಗ್ರಾಮದ ವಿರೂಪಾಕ್ಷ ಅವರ ಪತ್ನಿ ಎಂ. ಪವಿತ್ರಾ (28) ಮೃತಪಟ್ಟ ಬಾಣಂತಿ.</p>.<p>ಘಟನೆಯ ವಿವರ: ವಿರೂಪಾಕ್ಷ ಅವರು ತಮ್ಮ ಪತ್ನಿಯನ್ನು ಮೂರನೇ ಹೆರಿಗೆಗೆ ಬುಧವಾರ ಸಂಜೆ 5 ಗಂಟೆಗೆ ನ್ಯಾಮತಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದರು. ತಡರಾತ್ರಿ 2 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ ಪವಿತ್ರಾ ಅವರಿಗೆ ತೀವ್ರ ರಕ್ತಸ್ರಾವ ಆಗಿದೆ. ಬೆಳಿಗ್ಗೆ 4 ಗಂಟೆ ವೇಳೆಗೆ ವೈದ್ಯರು ಆಂಬುಲೆನ್ಸ್ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದರು. ಆಸ್ಪತ್ರೆಯನ್ನು ತಲುಪುವ ಮುನ್ನ ಮಾರ್ಗಮಧ್ಯೆಯೇ ಬಾಣಂತಿಯು ರಕ್ತಸ್ರಾವದಿಂದ ನಿತ್ರಾಣರಾಗಿ ಪ್ರಜ್ಞಾಹೀನರಾದರು. ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಅವರು ಗುರುವಾರ ರಾತ್ರಿ ಮೃತಪಟ್ಟರು.</p>.<p>ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಬಾಣಂತಿ ಸಾವಿಗೆ ನ್ಯಾಮತಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಸಂಬಂಧಪಟ್ಟ ವೈದ್ಯರು ತಪ್ಪೊಪ್ಪಿಗೆ ನೀಡಬೇಕು ಎಂದು ಪಟ್ಟು ಹಿಡಿದರು.</p>.<p>‘ರಾತ್ರಿ ಪಾಳಿಯ ವೈದ್ಯರು ಮದ್ಯಪಾನ ಮಾಡಿ ಬರುತ್ತಾರೆ. ನರ್ಸ್ಗಳು ಹೆರಿಗೆ ಮಾಡಿಸಿ ಹಣಕ್ಕೆ ಒತ್ತಾಯ ಮಾಡುತ್ತಾರೆ. ಆಂಬುಲೆನ್ಸ್ ಚಾಲಕರು ಹಣ ಕೇಳುತ್ತಾರೆ’ ಎಂದು ಆರೋಪಿಸಿದ ಗ್ರಾಮಸ್ಥರು, ಆಸ್ಪತ್ರೆಯ ಆಡಳಿತಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಹೆರಿಗೆ ಮಾಡಿಸಿದ ವೈದ್ಯರು ಕ್ಷಮೆಯಾಚನೆ ಮಾಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.</p>.<p>ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಂ.ಪಿ.ಬಸವರಾಜ, ಗ್ರಾಮದ ಹಿರಿಯರಾದ ಜೆ.ಹಳದಪ್ಪ, ಎಂ.ಆರ್.ಗಣೇಶ, ಎಸ್.ಟಿ.ನಾಗರಾಜಪ್ಪ, ಚೋರಡಿ ನಾಗಪ್ಪ, ವಿರೂಪಾಕ್ಷಪ್ಪ, ಹುಬ್ಬಳ್ಳಿ ಮಂಜಪ್ಪ, ಹವಳಿ ಮಂಜಪ್ಪ, ಬಿ.ಆರ್.ಅಣ್ಣಪ್ಪ ಮತ್ತು ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-43-1312855372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಂಬಂಧಿಕರು ಹಾಗೂ ತಾಲ್ಲೂಕಿನ ಫಲವನಹಳ್ಳಿ ಗ್ರಾಮಸ್ಥರು ಇಲ್ಲಿನ ಸಮುದಾಯ ಆಸ್ಪತ್ರೆಗೆ ಶುಕ್ರವಾರ ಮುತ್ತಿಗೆ ಹಾಕಿದರು.</p>.<p>ಫಲವನಹಳ್ಳಿ ಗ್ರಾಮದ ವಿರೂಪಾಕ್ಷ ಅವರ ಪತ್ನಿ ಎಂ. ಪವಿತ್ರಾ (28) ಮೃತಪಟ್ಟ ಬಾಣಂತಿ.</p>.<p>ಘಟನೆಯ ವಿವರ: ವಿರೂಪಾಕ್ಷ ಅವರು ತಮ್ಮ ಪತ್ನಿಯನ್ನು ಮೂರನೇ ಹೆರಿಗೆಗೆ ಬುಧವಾರ ಸಂಜೆ 5 ಗಂಟೆಗೆ ನ್ಯಾಮತಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದರು. ತಡರಾತ್ರಿ 2 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ ಪವಿತ್ರಾ ಅವರಿಗೆ ತೀವ್ರ ರಕ್ತಸ್ರಾವ ಆಗಿದೆ. ಬೆಳಿಗ್ಗೆ 4 ಗಂಟೆ ವೇಳೆಗೆ ವೈದ್ಯರು ಆಂಬುಲೆನ್ಸ್ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದರು. ಆಸ್ಪತ್ರೆಯನ್ನು ತಲುಪುವ ಮುನ್ನ ಮಾರ್ಗಮಧ್ಯೆಯೇ ಬಾಣಂತಿಯು ರಕ್ತಸ್ರಾವದಿಂದ ನಿತ್ರಾಣರಾಗಿ ಪ್ರಜ್ಞಾಹೀನರಾದರು. ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಅವರು ಗುರುವಾರ ರಾತ್ರಿ ಮೃತಪಟ್ಟರು.</p>.<p>ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಬಾಣಂತಿ ಸಾವಿಗೆ ನ್ಯಾಮತಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಸಂಬಂಧಪಟ್ಟ ವೈದ್ಯರು ತಪ್ಪೊಪ್ಪಿಗೆ ನೀಡಬೇಕು ಎಂದು ಪಟ್ಟು ಹಿಡಿದರು.</p>.<p>‘ರಾತ್ರಿ ಪಾಳಿಯ ವೈದ್ಯರು ಮದ್ಯಪಾನ ಮಾಡಿ ಬರುತ್ತಾರೆ. ನರ್ಸ್ಗಳು ಹೆರಿಗೆ ಮಾಡಿಸಿ ಹಣಕ್ಕೆ ಒತ್ತಾಯ ಮಾಡುತ್ತಾರೆ. ಆಂಬುಲೆನ್ಸ್ ಚಾಲಕರು ಹಣ ಕೇಳುತ್ತಾರೆ’ ಎಂದು ಆರೋಪಿಸಿದ ಗ್ರಾಮಸ್ಥರು, ಆಸ್ಪತ್ರೆಯ ಆಡಳಿತಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಹೆರಿಗೆ ಮಾಡಿಸಿದ ವೈದ್ಯರು ಕ್ಷಮೆಯಾಚನೆ ಮಾಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.</p>.<p>ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಂ.ಪಿ.ಬಸವರಾಜ, ಗ್ರಾಮದ ಹಿರಿಯರಾದ ಜೆ.ಹಳದಪ್ಪ, ಎಂ.ಆರ್.ಗಣೇಶ, ಎಸ್.ಟಿ.ನಾಗರಾಜಪ್ಪ, ಚೋರಡಿ ನಾಗಪ್ಪ, ವಿರೂಪಾಕ್ಷಪ್ಪ, ಹುಬ್ಬಳ್ಳಿ ಮಂಜಪ್ಪ, ಹವಳಿ ಮಂಜಪ್ಪ, ಬಿ.ಆರ್.ಅಣ್ಣಪ್ಪ ಮತ್ತು ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-43-1312855372</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>