<p><strong>ಸಾಗರ</strong>: ಅಪ್ಪಟ ಮಲೆನಾಡು ಎಂಬ ಹಣೆಪಟ್ಟಿ ಹೊತ್ತಿದ್ದರೂ ಬೇಸಿಗೆಯಲ್ಲಿ ಈ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ನೀರಿಗೆ ಬವಣೆ ತಪ್ಪಿದ್ದಲ್ಲ. ಯಥೇಚ್ಛ ಪ್ರಮಾಣದಲ್ಲಿ ಮಳೆಯಾದ ವರ್ಷ ಕೂಡ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುವುದು ಸಾಮಾನ್ಯ ಎನ್ನುವಂತಾಗಿದೆ.</p>.<p>ಸಾಗರ ತಾಲ್ಲೂಕಿನ ವಾರ್ಷಿಕ ಮಳೆಯ ಪ್ರಮಾಣಕ್ಕಿಂತ ಕಳೆದ ವರ್ಷ ಶೇ 11ರಷ್ಟು ಹೆಚ್ಚು ಮಳೆಯಾಗಿದೆ. ನೈರುತ್ಯ ಮಳೆಯ ತಿಂಗಳು ಎಂದು ಗುರುತಿಸುವ ಜೂನ್ನಿಂದ ಸೆಪ್ಟೆಂಬರ್ ತಿಂಗಳವರೆಗೆ ವಾಡಿಕೆಯಂತೆ 2462 ಮಿ.ಮೀ. ಮಳೆಯಾಗಬೇಕಿತ್ತು. ಆಗಿರುವ ಮಳೆಯ ಪ್ರಮಾಣ 3384 ಮಿ.ಮೀ.</p>.<p>ಕಳೆದ ವರ್ಷ ತಾಲ್ಲೂಕಿನಲ್ಲಿ 102 ಗ್ರಾಮಗಳನ್ನು ನೀರಿನ ಕೊರತೆ ಇರುವ ಗ್ರಾಮಗಳು ಎಂದು ಗುರುತಿಸಲಾಗಿತ್ತು. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಈ ಗ್ರಾಮಗಳಿಗೆ 2859 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ₹ 30 ಲಕ್ಷ ಖರ್ಚು ಮಾಡಲಾಗಿತ್ತು.</p>.<p>ಈ ವರ್ಷ ಇಲ್ಲಿನ ತಾಲ್ಲೂಕು ಪಂಚಾಯಿತಿಯು 30 ಪಂಚಾಯಿತಿ ವ್ಯಾಪ್ತಿಯ 182 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗುರುತಿಸಿದೆ. ಹೀಗೆ ಕೊರತೆ ಬರಲು ತೆರೆದ ಬಾವಿ ಹಾಗೂ ಕೊಳವೆಬಾವಿಗಳಲ್ಲಿನ ಅಂತರ್ಜಲದ ಮಟ್ಟ ಕುಸಿದಿರುವುದೇ ಪ್ರಮುಖ ಕಾರಣ ಎಂದು ಗುರುತಿಸಲಾಗಿದೆ.</p>.<p>ಸಾಗರ ತಾಲ್ಲೂಕು ಪಶ್ಚಿಮಘಟ್ಟ ವ್ಯಾಪ್ತಿಗೆ ಬರುತ್ತಿದ್ದು, ಇದನ್ನು ಗುಡ್ಡಗಾಡು ವಲಯ ಎಂದೇ ಗುರುತಿಸಲಾಗಿದೆ. ಇಲ್ಲಿ ಮಳೆಗಾಲದಲ್ಲಿ ಹರಿಯುವ ನೀರನ್ನು ಹಿಡಿದಿಡುವ ದೂರಗಾಮಿ ಯೋಜನೆಗೆ ಒತ್ತು ನೀಡದೆ ಇರುವುದು ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಕಾರಣವಾಗಿದೆ.</p>.<p>ಇತ್ತೀಚಿನ ವರ್ಷಗಳಲ್ಲಿ ಸಾಂಪ್ರದಾಯಿಕ ಕೃಷಿಯ ಸ್ಥಾನ ಅಲಂಕರಿಸಿದ ಬದಲಾದ ಕೃಷಿಯ ಸ್ವರೂಪ, ಅರಣ್ಯ ನಾಶ, ಭೂ ಒತ್ತುವರಿ, ಜೀವವೈವಿಧ್ಯ ಸಂರಕ್ಷಣೆಯಲ್ಲಿನ ವೈಫಲ್ಯ, ಕೆರೆಗಳ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಹೀಗೆ ಹತ್ತು ಹಲವು ಅಂಶಗಳು ನೀರಿನ ಬವಣೆಗೆ ತನ್ನದೇ ಆದ ಕೊಡುಗೆ ನೀಡುತ್ತಿವೆ.</p>.<p>ಈ ಹಿಂದೆ ಸಾಗರ ನಗರಕ್ಕೆ ನಗರದ ಹೊರವಲಯದಲ್ಲಿನ ಬಸವನಹೊಳೆ ಡ್ಯಾಂ ಮೂಲಕ ನೀರು ಪೂರೈಸಲಾಗುತ್ತಿತ್ತು.</p>.<p>ನಂತರ ಶರಾವತಿ ಹಿನ್ನೀರಿನಿಂದ ನಗರಕ್ಕೆ ನೀರು ತರುವ ಯೋಜನೆ ಕಾರ್ಯಗತಗೊಂಡಿದ್ದು, ನಗರದ ಜನರ ಕುಡಿಯುವ ನೀರಿನ ಬವಣೆಯನ್ನು ಕಡಿಮೆ ಮಾಡಿದೆ.</p>.<p>ಆದರೆ ಈ ಯೋಜನೆ ಕಾರ್ಯಗತಗೊಳ್ಳುವಾಗ ಮಾರ್ಗ ಮಧ್ಯದ ಹಳ್ಳಿಗಳಿಗೆ ನೀರು ಪೂರೈಸಬೇಕು ಎಂಬ ಗ್ರಾಮಸ್ಥರ ಒತ್ತಾಯ ಈವರೆಗೂ ಈಡೇರಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಅಪ್ಪಟ ಮಲೆನಾಡು ಎಂಬ ಹಣೆಪಟ್ಟಿ ಹೊತ್ತಿದ್ದರೂ ಬೇಸಿಗೆಯಲ್ಲಿ ಈ ತಾಲ್ಲೂಕಿನ ಹಲವಾರು ಹಳ್ಳಿಗಳಲ್ಲಿ ನೀರಿಗೆ ಬವಣೆ ತಪ್ಪಿದ್ದಲ್ಲ. ಯಥೇಚ್ಛ ಪ್ರಮಾಣದಲ್ಲಿ ಮಳೆಯಾದ ವರ್ಷ ಕೂಡ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುವುದು ಸಾಮಾನ್ಯ ಎನ್ನುವಂತಾಗಿದೆ.</p>.<p>ಸಾಗರ ತಾಲ್ಲೂಕಿನ ವಾರ್ಷಿಕ ಮಳೆಯ ಪ್ರಮಾಣಕ್ಕಿಂತ ಕಳೆದ ವರ್ಷ ಶೇ 11ರಷ್ಟು ಹೆಚ್ಚು ಮಳೆಯಾಗಿದೆ. ನೈರುತ್ಯ ಮಳೆಯ ತಿಂಗಳು ಎಂದು ಗುರುತಿಸುವ ಜೂನ್ನಿಂದ ಸೆಪ್ಟೆಂಬರ್ ತಿಂಗಳವರೆಗೆ ವಾಡಿಕೆಯಂತೆ 2462 ಮಿ.ಮೀ. ಮಳೆಯಾಗಬೇಕಿತ್ತು. ಆಗಿರುವ ಮಳೆಯ ಪ್ರಮಾಣ 3384 ಮಿ.ಮೀ.</p>.<p>ಕಳೆದ ವರ್ಷ ತಾಲ್ಲೂಕಿನಲ್ಲಿ 102 ಗ್ರಾಮಗಳನ್ನು ನೀರಿನ ಕೊರತೆ ಇರುವ ಗ್ರಾಮಗಳು ಎಂದು ಗುರುತಿಸಲಾಗಿತ್ತು. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಈ ಗ್ರಾಮಗಳಿಗೆ 2859 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ₹ 30 ಲಕ್ಷ ಖರ್ಚು ಮಾಡಲಾಗಿತ್ತು.</p>.<p>ಈ ವರ್ಷ ಇಲ್ಲಿನ ತಾಲ್ಲೂಕು ಪಂಚಾಯಿತಿಯು 30 ಪಂಚಾಯಿತಿ ವ್ಯಾಪ್ತಿಯ 182 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗುರುತಿಸಿದೆ. ಹೀಗೆ ಕೊರತೆ ಬರಲು ತೆರೆದ ಬಾವಿ ಹಾಗೂ ಕೊಳವೆಬಾವಿಗಳಲ್ಲಿನ ಅಂತರ್ಜಲದ ಮಟ್ಟ ಕುಸಿದಿರುವುದೇ ಪ್ರಮುಖ ಕಾರಣ ಎಂದು ಗುರುತಿಸಲಾಗಿದೆ.</p>.<p>ಸಾಗರ ತಾಲ್ಲೂಕು ಪಶ್ಚಿಮಘಟ್ಟ ವ್ಯಾಪ್ತಿಗೆ ಬರುತ್ತಿದ್ದು, ಇದನ್ನು ಗುಡ್ಡಗಾಡು ವಲಯ ಎಂದೇ ಗುರುತಿಸಲಾಗಿದೆ. ಇಲ್ಲಿ ಮಳೆಗಾಲದಲ್ಲಿ ಹರಿಯುವ ನೀರನ್ನು ಹಿಡಿದಿಡುವ ದೂರಗಾಮಿ ಯೋಜನೆಗೆ ಒತ್ತು ನೀಡದೆ ಇರುವುದು ಹಳ್ಳಿಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಕಾರಣವಾಗಿದೆ.</p>.<p>ಇತ್ತೀಚಿನ ವರ್ಷಗಳಲ್ಲಿ ಸಾಂಪ್ರದಾಯಿಕ ಕೃಷಿಯ ಸ್ಥಾನ ಅಲಂಕರಿಸಿದ ಬದಲಾದ ಕೃಷಿಯ ಸ್ವರೂಪ, ಅರಣ್ಯ ನಾಶ, ಭೂ ಒತ್ತುವರಿ, ಜೀವವೈವಿಧ್ಯ ಸಂರಕ್ಷಣೆಯಲ್ಲಿನ ವೈಫಲ್ಯ, ಕೆರೆಗಳ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಹೀಗೆ ಹತ್ತು ಹಲವು ಅಂಶಗಳು ನೀರಿನ ಬವಣೆಗೆ ತನ್ನದೇ ಆದ ಕೊಡುಗೆ ನೀಡುತ್ತಿವೆ.</p>.<p>ಈ ಹಿಂದೆ ಸಾಗರ ನಗರಕ್ಕೆ ನಗರದ ಹೊರವಲಯದಲ್ಲಿನ ಬಸವನಹೊಳೆ ಡ್ಯಾಂ ಮೂಲಕ ನೀರು ಪೂರೈಸಲಾಗುತ್ತಿತ್ತು.</p>.<p>ನಂತರ ಶರಾವತಿ ಹಿನ್ನೀರಿನಿಂದ ನಗರಕ್ಕೆ ನೀರು ತರುವ ಯೋಜನೆ ಕಾರ್ಯಗತಗೊಂಡಿದ್ದು, ನಗರದ ಜನರ ಕುಡಿಯುವ ನೀರಿನ ಬವಣೆಯನ್ನು ಕಡಿಮೆ ಮಾಡಿದೆ.</p>.<p>ಆದರೆ ಈ ಯೋಜನೆ ಕಾರ್ಯಗತಗೊಳ್ಳುವಾಗ ಮಾರ್ಗ ಮಧ್ಯದ ಹಳ್ಳಿಗಳಿಗೆ ನೀರು ಪೂರೈಸಬೇಕು ಎಂಬ ಗ್ರಾಮಸ್ಥರ ಒತ್ತಾಯ ಈವರೆಗೂ ಈಡೇರಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>