<p><strong>ಶಿವಮೊಗ್ಗ: </strong>ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿಗೆ ಶೀಘ್ರವೇ ₹ 1 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.</p>.<p>ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ಪ್ರವೇಶದ್ವಾರ, ವಿದ್ಯಾರ್ಥಿ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮೈಸೂರಿನ ಜಯಚಾಮರಾಜ ಒಡೆಯರಿಂದ ಸ್ಥಾಪಿಸಲ್ಪಟ್ಟ ಸಹ್ಯಾದ್ರಿ ಕಾಲೇಜು 80 ವರ್ಷಗಳ ಇತಿಹಾಸ ಹೊಂದಿದೆ. ಈ ಕಾಲೇಜಿನಲ್ಲಿ ಕಲಿತ ಪ್ರೊ.ಸಿ.ಎನ್.ಆರ್. ರಾವ್, ಜಸ್ಟೀಸ್ ರಾಮಾ ಜೋಯಿಸ್, ಶಾಂತವೇರಿ ಗೋಪಾಲಗೌಡ, ಪೂರ್ಣಚಂದ್ರ ತೇಜಸ್ವಿ, ಕೆ.ಎಸ್. ನಿಸಾರ್ ಅಹಮ್ಮದ್, ಬಿ.ಕೆ. ಸುಮಿತ್ರ ಸೇರಿ ಹಲವರು ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.</p>.<p>ಇಂತಹ ಇತಿಹಾಸ ಹೊಂದಿದ ಕಾಲೇಜಿನ ಹೊರಾಂಗಣ ಕ್ರೀಡಾಂಗಣ, ಪ್ರಯೋಗಾಲಯ, ಗ್ರಂಥಾಲಯ ಸೇರಿ ಹಲವು ಉನ್ನತೀಕರಣ ಕಾಮಗಾರಿಗಳಿಗೆ ಸದ್ಯಕ್ಕೆ ₹ 1 ಕೋಟಿ ಬಿಡುಗಡೆ ಮಾಡಲಿದ್ದು, ಉಳಿದ ಹಣವನ್ನು ಬಜೆಟ್ ನೋಡಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.</p>.<p><strong>ಕೊರೊನಾ ಸಂಕಷ್ಟದಲ್ಲೂ ಅಭಿವೃದ್ಧಿ ಕಾಮಗಾರಿ:</strong></p>.<p>ಕೊರೊನಾದಂತಹ ಸಂಕಷ್ಟ ಸಂದರ್ಭದಲ್ಲೂ ಅಭಿವೃದ್ಧಿ ಕಾಮಗಾರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸೇತುವೆ ನಿರ್ಮಾಣ, ವಿಮಾನ ನಿಲ್ದಾಣ, ರಸ್ತೆ ಕಾಮಗಾರಿ, ನೀರಾವರಿ ಯೋಜನೆಗಳು ಭರದಿಂದ ಸಾಗುತ್ತಿದೆ. ನಗರದ ವಾಹನ ದಟ್ಟಣೆ ತಗ್ಗಿಸಲು ₹ 450 ಕೋಟಿ ವೆಚ್ಚದಲ್ಲಿ ಹೊರವರ್ತುಲ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು.</p>.<p>ಸೋಗಾನೆಯ ವಿಮಾನ ನಿಲ್ದಾಣ 2022ರಲ್ಲಿ ಪೂರ್ಣಗೊಳ್ಳಲಿದ್ದು, ವಿಮಾನ ಹಾರಾಟ ಪ್ರಾರಂಭವಾಗಲಿದೆ. 3,200 ಮೀಟರ್ ಉದ್ದದ ರನ್ ವೇ ಹೆಚ್ಚಿಸಲಾಗಿದೆ. ಹೊಳೆ ಹನಸವಾಡಿಯಲ್ಲಿ ತುಂಗಾ ಏತ ನೀರಾವರಿ ಯೋಜನೆಗೆ ಉದ್ದೇಶಿಸಲಾಗಿದ್ದು, 20 ಕೆರೆಗಳು ತುಂಬಿಸುವ ಯೋಜನೆ ಇದಾಗಿದೆ ಎಂದು ಮಾಹಿತಿ ನೀಡಿದರು.</p>.<p>ವಿಮಾನ ನಿಲ್ದಾಣ ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಭರದಿಂದ ಸಾಗುತ್ತಿದ್ದು, ಶೀಘ್ರ ಕಾಮಗಾರಿ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಮಾತನಾಡಿದರು. ಶಾಸಕರಾದ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಎಸ್.ಎಲ್. ಬೋಜೇಗೌಡ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಎಸ್.ಎಸ್. ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿಗೆ ಶೀಘ್ರವೇ ₹ 1 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.</p>.<p>ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ಪ್ರವೇಶದ್ವಾರ, ವಿದ್ಯಾರ್ಥಿ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮೈಸೂರಿನ ಜಯಚಾಮರಾಜ ಒಡೆಯರಿಂದ ಸ್ಥಾಪಿಸಲ್ಪಟ್ಟ ಸಹ್ಯಾದ್ರಿ ಕಾಲೇಜು 80 ವರ್ಷಗಳ ಇತಿಹಾಸ ಹೊಂದಿದೆ. ಈ ಕಾಲೇಜಿನಲ್ಲಿ ಕಲಿತ ಪ್ರೊ.ಸಿ.ಎನ್.ಆರ್. ರಾವ್, ಜಸ್ಟೀಸ್ ರಾಮಾ ಜೋಯಿಸ್, ಶಾಂತವೇರಿ ಗೋಪಾಲಗೌಡ, ಪೂರ್ಣಚಂದ್ರ ತೇಜಸ್ವಿ, ಕೆ.ಎಸ್. ನಿಸಾರ್ ಅಹಮ್ಮದ್, ಬಿ.ಕೆ. ಸುಮಿತ್ರ ಸೇರಿ ಹಲವರು ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.</p>.<p>ಇಂತಹ ಇತಿಹಾಸ ಹೊಂದಿದ ಕಾಲೇಜಿನ ಹೊರಾಂಗಣ ಕ್ರೀಡಾಂಗಣ, ಪ್ರಯೋಗಾಲಯ, ಗ್ರಂಥಾಲಯ ಸೇರಿ ಹಲವು ಉನ್ನತೀಕರಣ ಕಾಮಗಾರಿಗಳಿಗೆ ಸದ್ಯಕ್ಕೆ ₹ 1 ಕೋಟಿ ಬಿಡುಗಡೆ ಮಾಡಲಿದ್ದು, ಉಳಿದ ಹಣವನ್ನು ಬಜೆಟ್ ನೋಡಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.</p>.<p><strong>ಕೊರೊನಾ ಸಂಕಷ್ಟದಲ್ಲೂ ಅಭಿವೃದ್ಧಿ ಕಾಮಗಾರಿ:</strong></p>.<p>ಕೊರೊನಾದಂತಹ ಸಂಕಷ್ಟ ಸಂದರ್ಭದಲ್ಲೂ ಅಭಿವೃದ್ಧಿ ಕಾಮಗಾರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸೇತುವೆ ನಿರ್ಮಾಣ, ವಿಮಾನ ನಿಲ್ದಾಣ, ರಸ್ತೆ ಕಾಮಗಾರಿ, ನೀರಾವರಿ ಯೋಜನೆಗಳು ಭರದಿಂದ ಸಾಗುತ್ತಿದೆ. ನಗರದ ವಾಹನ ದಟ್ಟಣೆ ತಗ್ಗಿಸಲು ₹ 450 ಕೋಟಿ ವೆಚ್ಚದಲ್ಲಿ ಹೊರವರ್ತುಲ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು.</p>.<p>ಸೋಗಾನೆಯ ವಿಮಾನ ನಿಲ್ದಾಣ 2022ರಲ್ಲಿ ಪೂರ್ಣಗೊಳ್ಳಲಿದ್ದು, ವಿಮಾನ ಹಾರಾಟ ಪ್ರಾರಂಭವಾಗಲಿದೆ. 3,200 ಮೀಟರ್ ಉದ್ದದ ರನ್ ವೇ ಹೆಚ್ಚಿಸಲಾಗಿದೆ. ಹೊಳೆ ಹನಸವಾಡಿಯಲ್ಲಿ ತುಂಗಾ ಏತ ನೀರಾವರಿ ಯೋಜನೆಗೆ ಉದ್ದೇಶಿಸಲಾಗಿದ್ದು, 20 ಕೆರೆಗಳು ತುಂಬಿಸುವ ಯೋಜನೆ ಇದಾಗಿದೆ ಎಂದು ಮಾಹಿತಿ ನೀಡಿದರು.</p>.<p>ವಿಮಾನ ನಿಲ್ದಾಣ ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಭರದಿಂದ ಸಾಗುತ್ತಿದ್ದು, ಶೀಘ್ರ ಕಾಮಗಾರಿ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಮಾತನಾಡಿದರು. ಶಾಸಕರಾದ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಎಸ್.ಎಲ್. ಬೋಜೇಗೌಡ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಎಸ್.ಎಸ್. ಪಾಟೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>