<p><strong>ಭದ್ರಾವತಿ</strong>: ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮಂಗಳವಾರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳು ನೂರಾರು ಹುಟ್ಟಿಕೊಂಡಿವೆ. ಈ ಕಂಪನಿಗಳಿಂದ ಸಾಲ ಪಡೆದ ಬಡ ಗ್ರಾಹಕರು ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿದರೂ ಸಹ ಗ್ರಾಹಕರ ಖಾತೆಗಳಿಂದ ಗೊತ್ತಿಲ್ಲದಂತೆ ಹಣ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ.</p>.<p>ಆದ್ದರಿಂದ ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳಿಂದ ಸಾಲ ಪಡೆಯದಂತೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮಂಗಳವಾರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳು ನೂರಾರು ಹುಟ್ಟಿಕೊಂಡಿವೆ. ಈ ಕಂಪನಿಗಳಿಂದ ಸಾಲ ಪಡೆದ ಬಡ ಗ್ರಾಹಕರು ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿದರೂ ಸಹ ಗ್ರಾಹಕರ ಖಾತೆಗಳಿಂದ ಗೊತ್ತಿಲ್ಲದಂತೆ ಹಣ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ.</p>.<p>ಆದ್ದರಿಂದ ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆನ್ಲೈನ್ನಲ್ಲಿ ಸಾಲ ನೀಡುವ ಕಂಪನಿಗಳಿಂದ ಸಾಲ ಪಡೆಯದಂತೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>