ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸ್ಮಾರ್ಟ್ ಸಿಟಿ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯಿಂದ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಕಳುಹಿಸಿದ ನೋಟಿಸ್ ಪ್ರಕರಣಗಳನ್ನು ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ಕೊನೆಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ವಾಹನ ಸವಾರರು ನಗರದ ನ್ಯೂಟೌನ್ ಸಂಚಾರಿ ಠಾಣೆಗೆ ಭೇಟಿ ನೀಡಿ ಹಣ ಪಾವತಿಸಿ ಪ್ರಕರಣ ಅಂತ್ಯ ಮಾಡಿಕೊಳ್ಳಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಠಾಣಾಧಿಕಾರಿ ಶಾಂತಲಾ ತಿಳಿಸಿದ್ದಾರೆ.