<p><strong>ಸಾಗರ</strong>: ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಆಲಳ್ಳಿ– ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಆರಂಭ ವಿರೋಧಿಸಿ ಭಾನುವಾರ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.</p>.<p>‘ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆಯುವುದರಿಂದ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>‘ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<p>ಪ್ರಮುಖರಾದ ಅಶೋಕ್ ಬರದವಳ್ಳಿ, ಎಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಆಲಳ್ಳಿ– ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಆರಂಭ ವಿರೋಧಿಸಿ ಭಾನುವಾರ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.</p>.<p>‘ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆಯುವುದರಿಂದ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>‘ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.</p>.<p>ಪ್ರಮುಖರಾದ ಅಶೋಕ್ ಬರದವಳ್ಳಿ, ಎಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>