ಶರಾವತಿ ನದಿಯ ಉಗಮ ಸ್ಥಾನ ಅಂಬುತೀರ್ಥವನ್ನು ಪ್ರವಾಸಿ ತಾಣವಾಗಿಸುವುದಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲಿನ ಪರಿಶಿಷ್ಟ ಕಾಲೊನಿಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವುದು. ಅಚ್ಚ ಕನ್ಯೆ ಜಲಪಾತದ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳುವುದು, ಮ್ಯಾಮ್ಕೋಸ್ನ ಹಿಡುವಳಿದಾರರ ಹಿತ ಕಾಯುವಲ್ಲಿ ಕ್ರಮ, ಗ್ರಾಮ ಒನ್ ಕೇಂದ್ರದ ಕೆಲಸ ಕಾರ್ಯಗಳಿಗೆ ವೇಗ ಕೊಡುವುದು, ಮಳೆ ಹಾನಿಯಿಂದ ಹಾಳಾದ ಜಮೀನಿಗೆ ತಡೆಗೋಡೆ ನಿರ್ಮಿಸುವುದು, ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಕೆಎಸ್ಆರ್ಟಿಸಿ ಬಸ್ ಓಡಾಟಕ್ಕೆ ಕ್ರಮ, ಬಿಎಸ್ಎನ್ಎಲ್ ನೆಟ್ವರ್ಕ್, ಅಕ್ರಮ ಮರಳು ಸಾಗಣೆ ಮತ್ತಿತರ ವಿಚಾರಗಳ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.