<p><strong>ಆನಂದಪುರ:</strong> ಪರಭಾಷಾ ವ್ಯಾಮೋಹ ಹೆಚ್ಚಾಗಿರುವ ಕಾರಣ ಪೋಷಕರಿಗೆ ತಮ್ಮ ಮಕ್ಕಳಿಗೆ ಇಂಗ್ಲಿಷ್ ಕಲಿಸುವ ಹುಚ್ಚು ಹೆಚ್ಚಾಗುತ್ತಿದೆ ಎಂದು ಮುರುಘಾ ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>ಸಮೀಪದ ಗಿಳಾಲಗುಂಡಿ ಸಮೀಪದ ಕೊಲ್ಲಿ ಬಚ್ಚಲು ಡ್ಯಾಂ ಆವರಣದಲ್ಲಿ ರಾಯಲ್ ಕ್ಲಬ್ನಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಂದ ಅಪ್ಪ ಅಮ್ಮ ಎಂದು ಕರೆಸಿಕೊಳ್ಳಲೂ ಸಂಕೋಚ ಪಡುತ್ತಿರುವುದನ್ನು ನೋಡಿದರೆ ಕನ್ನಡಾಭಿಮಾನ, ಭಾಷೆಯ ಸ್ಥಿತಿ ತಿಳಿಯುತ್ತದೆ. ಮಮ್ಮಿ ಎನ್ನುವ ಬದಲು ಅಮ್ಮ ಎಂದರೆ ಅವರ ಪ್ರತಿಷ್ಠೆಗೆ ಧಕ್ಕೆಯಾಗುತ್ತದೆ ಎನ್ನುವ ಮನಸ್ಥಿತಿ ತಲುಪಿದ್ದಾರೆ ಎಂದು ವಿಷಾದಿಸಿದರು.</p>.<p>‘ನಾವು ಯಾವುದೇ ರಾಜ್ಯಗಳಿಗೆ ಹೊದರೂ ಅವರ ಸ್ಥಳೀಯ ಭಾಷೆಯಲ್ಲೇ ವ್ಯವಹಾರಿಸುತ್ತಾರೆ. ಆದರೆ, ಹೋರರಾಜ್ಯದವರು ನಮ್ಮಲ್ಲಿಗೆ ಬಂದಾಗ ಅವರಿಗೆ ನಮ್ಮ ಭಾಷೆ ಕಲಿಸುವ ಬದಲು ಅವರ ಭಾಷೆಯಲ್ಲೇ ಮಾತನಾಡಲು ಪ್ರಯತ್ನಿಸುವುದು ಎದ್ದು ಕಾಣುತ್ತಿರುವುದು ದುರಂತವಾಗಿದೆ’ ಎಂದು ಹೇಳಿದರು.</p>.<p>ಉಪನ್ಯಾಸಕ ಡಾ.ಶ್ರೀಪತಿ ಹಳಗುಂದ ಮಾತನಾಡಿ, ‘ಕನ್ನಡವನ್ನು ಶುದ್ಧವಾಗಿ ಬರೆಯುವ, ಮಾತನಾಡುವ ಕೌಶಲವನ್ನು ಬೆಳೆಸಿಕೊಳ್ಳುವುದೇ ಕನ್ನಡಕ್ಕೆ ಮಾಡುವ ನಿಜವಾದ ಸೇವೆಯಾಗಿದೆ. ಕನ್ನಡಿಗರಲ್ಲದ ಕವಿಗಳು ಕನ್ನಡಕ್ಕೆ ನೀಡಿದ ಕೊಡುಗೆ ಅಪಾರ. ಆದರೆ, ಕನ್ನಡಿಗರಾದ ನಮ್ಮ ಕೊಡುಗೆ ಏನು ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕರ್ಮ ಸಿದ್ಧಾಂತದ ಮೇಲೆ ನಂಬಿಕೆ ಇರುವ ನಾಡು ನಮ್ಮದಾಗಿದೆ. ನಮ್ಮವರು ಕನ್ನಡ ಮಾತನಾಡಿದರೆ ಅಪಮಾನ ಎಂದು ಭಾವಿಸುತ್ತಿರುವುದು ದುರದೃಷ್ಟಕರ. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ, ಭಾಷಾ ಕೊರತೆಯಿಂದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಕಷ್ಟವಾಗಿದೆ’ ಎಂದು ಹೇಳಿದರು.</p>.<p>ಗುರುಗಳಾದ ರೆವರೆಂಡ್ ಫಾದರ್ ಮಿನಿನ್ ಅಲ್ಮೆಡಾ, ಜಾಮಿಯಾ ಮಸೀದಿಯ ಹಜರತ್ ಮೌಲಾನಾ ಮುಫ್ತಿ ಮಹಮದ್ ಖಾಸ್ಮಿ ಸಾಹೇಬ್, ರಾಯಲ್ ಕ್ಲಬ್ ಅಧ್ಯಕ್ಷರಾದ ರಾಘವೇಂದ್ರ ಶೇಟ್, ಪ್ರಮುಖರಾದ ಮಹೇಶ್, ಜಲೀಲ, ಶಿವಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನಂದಪುರ:</strong> ಪರಭಾಷಾ ವ್ಯಾಮೋಹ ಹೆಚ್ಚಾಗಿರುವ ಕಾರಣ ಪೋಷಕರಿಗೆ ತಮ್ಮ ಮಕ್ಕಳಿಗೆ ಇಂಗ್ಲಿಷ್ ಕಲಿಸುವ ಹುಚ್ಚು ಹೆಚ್ಚಾಗುತ್ತಿದೆ ಎಂದು ಮುರುಘಾ ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>ಸಮೀಪದ ಗಿಳಾಲಗುಂಡಿ ಸಮೀಪದ ಕೊಲ್ಲಿ ಬಚ್ಚಲು ಡ್ಯಾಂ ಆವರಣದಲ್ಲಿ ರಾಯಲ್ ಕ್ಲಬ್ನಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಂದ ಅಪ್ಪ ಅಮ್ಮ ಎಂದು ಕರೆಸಿಕೊಳ್ಳಲೂ ಸಂಕೋಚ ಪಡುತ್ತಿರುವುದನ್ನು ನೋಡಿದರೆ ಕನ್ನಡಾಭಿಮಾನ, ಭಾಷೆಯ ಸ್ಥಿತಿ ತಿಳಿಯುತ್ತದೆ. ಮಮ್ಮಿ ಎನ್ನುವ ಬದಲು ಅಮ್ಮ ಎಂದರೆ ಅವರ ಪ್ರತಿಷ್ಠೆಗೆ ಧಕ್ಕೆಯಾಗುತ್ತದೆ ಎನ್ನುವ ಮನಸ್ಥಿತಿ ತಲುಪಿದ್ದಾರೆ ಎಂದು ವಿಷಾದಿಸಿದರು.</p>.<p>‘ನಾವು ಯಾವುದೇ ರಾಜ್ಯಗಳಿಗೆ ಹೊದರೂ ಅವರ ಸ್ಥಳೀಯ ಭಾಷೆಯಲ್ಲೇ ವ್ಯವಹಾರಿಸುತ್ತಾರೆ. ಆದರೆ, ಹೋರರಾಜ್ಯದವರು ನಮ್ಮಲ್ಲಿಗೆ ಬಂದಾಗ ಅವರಿಗೆ ನಮ್ಮ ಭಾಷೆ ಕಲಿಸುವ ಬದಲು ಅವರ ಭಾಷೆಯಲ್ಲೇ ಮಾತನಾಡಲು ಪ್ರಯತ್ನಿಸುವುದು ಎದ್ದು ಕಾಣುತ್ತಿರುವುದು ದುರಂತವಾಗಿದೆ’ ಎಂದು ಹೇಳಿದರು.</p>.<p>ಉಪನ್ಯಾಸಕ ಡಾ.ಶ್ರೀಪತಿ ಹಳಗುಂದ ಮಾತನಾಡಿ, ‘ಕನ್ನಡವನ್ನು ಶುದ್ಧವಾಗಿ ಬರೆಯುವ, ಮಾತನಾಡುವ ಕೌಶಲವನ್ನು ಬೆಳೆಸಿಕೊಳ್ಳುವುದೇ ಕನ್ನಡಕ್ಕೆ ಮಾಡುವ ನಿಜವಾದ ಸೇವೆಯಾಗಿದೆ. ಕನ್ನಡಿಗರಲ್ಲದ ಕವಿಗಳು ಕನ್ನಡಕ್ಕೆ ನೀಡಿದ ಕೊಡುಗೆ ಅಪಾರ. ಆದರೆ, ಕನ್ನಡಿಗರಾದ ನಮ್ಮ ಕೊಡುಗೆ ಏನು ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕರ್ಮ ಸಿದ್ಧಾಂತದ ಮೇಲೆ ನಂಬಿಕೆ ಇರುವ ನಾಡು ನಮ್ಮದಾಗಿದೆ. ನಮ್ಮವರು ಕನ್ನಡ ಮಾತನಾಡಿದರೆ ಅಪಮಾನ ಎಂದು ಭಾವಿಸುತ್ತಿರುವುದು ದುರದೃಷ್ಟಕರ. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ, ಭಾಷಾ ಕೊರತೆಯಿಂದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಕಷ್ಟವಾಗಿದೆ’ ಎಂದು ಹೇಳಿದರು.</p>.<p>ಗುರುಗಳಾದ ರೆವರೆಂಡ್ ಫಾದರ್ ಮಿನಿನ್ ಅಲ್ಮೆಡಾ, ಜಾಮಿಯಾ ಮಸೀದಿಯ ಹಜರತ್ ಮೌಲಾನಾ ಮುಫ್ತಿ ಮಹಮದ್ ಖಾಸ್ಮಿ ಸಾಹೇಬ್, ರಾಯಲ್ ಕ್ಲಬ್ ಅಧ್ಯಕ್ಷರಾದ ರಾಘವೇಂದ್ರ ಶೇಟ್, ಪ್ರಮುಖರಾದ ಮಹೇಶ್, ಜಲೀಲ, ಶಿವಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>