<p><strong>ಶಿವಮೊಗ್ಗ</strong>: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳನ್ನು ಪರಿಗಣಿಸದೇ ಇರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.</p>.<p>ರಾಜ್ಯ ಸರ್ಕಾರ ಮುಂಗಾರು ಮಳೆಯಿಂದ ತೀವ್ರ ಹಾನಿಗೊಳಗಾದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಸೇರಿವೆ. ಸಾಗರ, ಸೊರಬ, ಶಿಕಾರಿಪುರ ಹಾಗೂ ಶಿವಮೊಗ್ಗ ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಹೆಚ್ಚು ಹಾನಿ ಸಂಭವಿಸಿದ ಹಾಗೂ ಅತಿ ಹೆಚ್ಚು ಮಳೆಯಾದ ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳನ್ನು ಈ ಪಟ್ಟಿಯಿಂದ ಕೈ ಬಿಟ್ಟಿರುವುದು ಆಚ್ಚರಿ ಮೂಡಿಸಿದೆ. ಈ ಎರಡೂ ತಾಲ್ಲೂಕಿನಲ್ಲಿ ಗುಡ್ಡ ಕುಸಿತ, ಧರೆ ಕುಸಿತ ಪ್ರಕರಣಗಳು, ಕಾಲು ಸಂಕ ಕೊಚ್ಚಿ ಹೋದ ಪ್ರಕರಣಗಳು ಹೆಚ್ಚಿದ್ದರೂ ಅತಿವೃಷ್ಟಿ ಪೀಡಿತ ಎಂದು ಪರಿಗಣಿಸದೇ ಇರುವುದು ವಿಪರ್ಯಾಸ ಎಂದು ತೀರ್ಥಹಳ್ಳಿಯ ಅಖಿಲೇಶ್ ಪ್ರತಿಕ್ರಿಯಿಸಿದರು.</p>.<p>ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ₹ 490 ಕೋಟಿ ಅಧಿಕ ನಷ್ಟ ಸಂಭವಿಸಿದೆ. ಇದರಲ್ಲಿ ಹೆಚ್ಚಿನ ನಷ್ಟ ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಉಂಟಾಗಿದೆ. ಒಂದೇ ದಿನದಲ್ಲಿ 400 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿತ್ತು. ಇಷ್ಟೆಲ್ಲ ಅನಾಹುತ ಸಂಭವಿಸಿದ್ದರೂ ಈ ಎರಡು ತಾಲ್ಲೂಕುಗಳು ಅತಿವೃಷ್ಟಿ ಪೀಡಿತ ಪಟ್ಟಿಯಿಂದ ಹೊರಗುಳಿದಿವೆ. ಈ ತರತಮ್ಯ ಏಕೆ ಎಂದು ಹೊಸನಗರದ ಅನಂತ್ ಪ್ರಶ್ನಿಸಿದರು.</p>.<p><strong>ಪಟ್ಟಿಗೆ ಸೇರಿಸಲು ಈಗಲೂ ಅವಕಾಶವಿದೆ</strong><br />ಬಿದ್ದ ಮಳೆಯ ಪ್ರಮಾಣವನ್ನು ಆಧರಿಸಿಯೇ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈಗಲೂ ಅತಿವೃಷ್ಟಿ ಪೀಡಿತ ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲು ಅವಕಾಶವಿದೆ.<br /><em><strong>-ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳನ್ನು ಪರಿಗಣಿಸದೇ ಇರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.</p>.<p>ರಾಜ್ಯ ಸರ್ಕಾರ ಮುಂಗಾರು ಮಳೆಯಿಂದ ತೀವ್ರ ಹಾನಿಗೊಳಗಾದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಸೇರಿವೆ. ಸಾಗರ, ಸೊರಬ, ಶಿಕಾರಿಪುರ ಹಾಗೂ ಶಿವಮೊಗ್ಗ ತಾಲ್ಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಲಾಗಿದೆ.</p>.<p>ಜಿಲ್ಲೆಯಲ್ಲಿ ಹೆಚ್ಚು ಹಾನಿ ಸಂಭವಿಸಿದ ಹಾಗೂ ಅತಿ ಹೆಚ್ಚು ಮಳೆಯಾದ ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳನ್ನು ಈ ಪಟ್ಟಿಯಿಂದ ಕೈ ಬಿಟ್ಟಿರುವುದು ಆಚ್ಚರಿ ಮೂಡಿಸಿದೆ. ಈ ಎರಡೂ ತಾಲ್ಲೂಕಿನಲ್ಲಿ ಗುಡ್ಡ ಕುಸಿತ, ಧರೆ ಕುಸಿತ ಪ್ರಕರಣಗಳು, ಕಾಲು ಸಂಕ ಕೊಚ್ಚಿ ಹೋದ ಪ್ರಕರಣಗಳು ಹೆಚ್ಚಿದ್ದರೂ ಅತಿವೃಷ್ಟಿ ಪೀಡಿತ ಎಂದು ಪರಿಗಣಿಸದೇ ಇರುವುದು ವಿಪರ್ಯಾಸ ಎಂದು ತೀರ್ಥಹಳ್ಳಿಯ ಅಖಿಲೇಶ್ ಪ್ರತಿಕ್ರಿಯಿಸಿದರು.</p>.<p>ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ₹ 490 ಕೋಟಿ ಅಧಿಕ ನಷ್ಟ ಸಂಭವಿಸಿದೆ. ಇದರಲ್ಲಿ ಹೆಚ್ಚಿನ ನಷ್ಟ ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಉಂಟಾಗಿದೆ. ಒಂದೇ ದಿನದಲ್ಲಿ 400 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿತ್ತು. ಇಷ್ಟೆಲ್ಲ ಅನಾಹುತ ಸಂಭವಿಸಿದ್ದರೂ ಈ ಎರಡು ತಾಲ್ಲೂಕುಗಳು ಅತಿವೃಷ್ಟಿ ಪೀಡಿತ ಪಟ್ಟಿಯಿಂದ ಹೊರಗುಳಿದಿವೆ. ಈ ತರತಮ್ಯ ಏಕೆ ಎಂದು ಹೊಸನಗರದ ಅನಂತ್ ಪ್ರಶ್ನಿಸಿದರು.</p>.<p><strong>ಪಟ್ಟಿಗೆ ಸೇರಿಸಲು ಈಗಲೂ ಅವಕಾಶವಿದೆ</strong><br />ಬಿದ್ದ ಮಳೆಯ ಪ್ರಮಾಣವನ್ನು ಆಧರಿಸಿಯೇ ಅತಿವೃಷ್ಟಿ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈಗಲೂ ಅತಿವೃಷ್ಟಿ ಪೀಡಿತ ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲು ಅವಕಾಶವಿದೆ.<br /><em><strong>-ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>