‘ಬದುಕಿನ ಪ್ರತಿ ಘಟನೆಗಳನ್ನೂ ವಿಭಿನ್ನವಾಗಿ ನೋಡುವ, ವಿಶ್ಲೇಷಿಸುವ, ಟೀಕಿಸುವ ಗುಣ ಲಂಕೇಶ್ ಅವರಲ್ಲಿ ಕರಗತವಾಗಿತ್ತು ಎಂದು ಸ್ಮರಿಸಿದರು. ಪ್ರಸ್ತುತ ಕಾಲಘಟ್ಟದಲ್ಲಿ ಒಂದು ಸಣ್ಣ ಟೀಕೆ ಸಹ ಪರಸ್ಪರ ಮುಖ ತಿರುಗಿಸುವ, ದ್ವೇಷ ಹರಡುವ ಕೆಲಸ ಮಾಡುತ್ತಿದೆ. ಲಂಕೇಶ್ ಅಂತಹ ಹತ್ತು ಹಲವು ಟೀಕೆ ಮಾಡಿದಾಗಲೂ ಸಮಾಜ ಸ್ಥಿತಪ್ರಜ್ಞೆಯಿಂದ ಸ್ವೀಕರಿಸುತ್ತಿತ್ತು’ ಎಂದು ಗತ ಘಟನೆಗಳನ್ನು ಮೆಲುಕು ಹಾಕಿದರು.