<p><strong>ಶಿಕಾರಿಪುರ:</strong> ಪಟ್ಟಣದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಪೀಠಾಧ್ಯಕ್ಷ ವೀರಸೋಮೆಶ್ವರ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ಪಾದಪೂಜೆ ಸ್ವೀಕರಿಸಿದರು.</p>.<p>ತಾಲ್ಲೂಕಿನ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸ ಸೇರಿ ಪಟ್ಟಣದ ಹಲವು ಭಕ್ತರ ಮನೆಯಲ್ಲಿ ನಡೆದ ಪಾದಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ನಂತರ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆಗಳನ್ನು ನಡೆಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ಪಟ್ಟಣದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಪೀಠಾಧ್ಯಕ್ಷ ವೀರಸೋಮೆಶ್ವರ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ಪಾದಪೂಜೆ ಸ್ವೀಕರಿಸಿದರು.</p>.<p>ತಾಲ್ಲೂಕಿನ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸ ಸೇರಿ ಪಟ್ಟಣದ ಹಲವು ಭಕ್ತರ ಮನೆಯಲ್ಲಿ ನಡೆದ ಪಾದಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ನಂತರ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆಗಳನ್ನು ನಡೆಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>