ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುರುತಿನ ಪತ್ರ ಪಡೆಯಲು ರೈತರು ತಮ್ಮ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಛಾಯಾಪ್ರತಿನೀಡಬೇಕು. ಗುರುತಿನ ಪತ್ರ ಪಡೆದ ನಂತರ ಆ ಕಾರ್ಡ್ ಪ್ರತಿಯ ಜೊತೆಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಎಪಿಎಂಸಿ ಆವರಣದಲ್ಲಿರುವ ಆಹಾರ ಇಲಾಖೆಯ ಉಗ್ರಾಣ ವಿಭಾಗಕ್ಕೆ ಸಲ್ಲಿಸಿ ಹೆಸರನ್ನು ನೋಂದಾಯಿಸಬೇಕು’ ಎಂದು ಮಾಹಿತಿ ನೀಡಿದರು.