<p><strong>ಸಾಗರ: </strong>ಯಕ್ಷಗಾನ ಕಲೆಯಲ್ಲಿ ಮನರಂಜನೆ ಜೊತೆಗೆ ಜೀವನದ ಕುರಿತ ಮಹತ್ವದ ಸಂದೇಶಗಳು ಅಡಗಿವೆ ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. </p><p>ಸಮೀಪದ ಮಡಸೂರು-ಲಿಂಗದಹಳ್ಳಿಯ ರಾಮಕೃಷ್ಣ ವಸತಿ ವಿದ್ಯಾಲಯದಲ್ಲಿ ಯಕ್ಷದ್ರವ ಪಟ್ಲ ಪೌಂಡೇಷನ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಯಕ್ಷಗಾನ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. </p><p>ರಾಮಾಯಣ, ಮಹಾಭಾರತ, ಉಪನಿಷತ್ನ ಹಲವು ಸಂಗತಿಗಳನ್ನು ಯಕ್ಷಗಾನ ಪ್ರಸಂಗಗಳ ಮೂಲಕ ಮನಮುಟ್ಟುವಂತೆ ತಲುಪಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡರೆ ಅವರ ಮನೋವಿಕಾಸಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಹೇಳಿದರು.</p><p>ರಾಮಕೃಷ್ಣ ವಿದ್ಯಾಲಯದ ಮುಖಸ್ಥ ದೇವರಾಜ್ ಡಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ನಗರ ರಾಘವೇಂದ್ರ, ಎಸ್.ವಿ.ಹಿತಕರ ಜೈನ್, ಗೋಪಾಲಮೂರ್ತಿ, ನಾರಾಯಣ, ಸರಿತಾ ದೇವರಾಜ್, ಹುಚ್ಚಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಯಕ್ಷಗಾನ ಕಲೆಯಲ್ಲಿ ಮನರಂಜನೆ ಜೊತೆಗೆ ಜೀವನದ ಕುರಿತ ಮಹತ್ವದ ಸಂದೇಶಗಳು ಅಡಗಿವೆ ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. </p><p>ಸಮೀಪದ ಮಡಸೂರು-ಲಿಂಗದಹಳ್ಳಿಯ ರಾಮಕೃಷ್ಣ ವಸತಿ ವಿದ್ಯಾಲಯದಲ್ಲಿ ಯಕ್ಷದ್ರವ ಪಟ್ಲ ಪೌಂಡೇಷನ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಯಕ್ಷಗಾನ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. </p><p>ರಾಮಾಯಣ, ಮಹಾಭಾರತ, ಉಪನಿಷತ್ನ ಹಲವು ಸಂಗತಿಗಳನ್ನು ಯಕ್ಷಗಾನ ಪ್ರಸಂಗಗಳ ಮೂಲಕ ಮನಮುಟ್ಟುವಂತೆ ತಲುಪಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ಆಸಕ್ತಿ ಬೆಳೆಸಿಕೊಂಡರೆ ಅವರ ಮನೋವಿಕಾಸಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಹೇಳಿದರು.</p><p>ರಾಮಕೃಷ್ಣ ವಿದ್ಯಾಲಯದ ಮುಖಸ್ಥ ದೇವರಾಜ್ ಡಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ನಗರ ರಾಘವೇಂದ್ರ, ಎಸ್.ವಿ.ಹಿತಕರ ಜೈನ್, ಗೋಪಾಲಮೂರ್ತಿ, ನಾರಾಯಣ, ಸರಿತಾ ದೇವರಾಜ್, ಹುಚ್ಚಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>