‘ನಟ ಪುನೀತ್ ರಾಜ್ಕುಮಾರ್ ವನ್ಯಜೀವಿಗಳು, ಕಾಡಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ಅವರಿಗೆ ವನ್ಯಪ್ರಾಣಿಗಳ ರಕ್ಷಣೆಯ ಕನಸಿತ್ತು. ಬಿಡಾರಕ್ಕೆ ಭೇಟಿ ನೀಡಿದ್ದ ಅವರು ಅರಣ್ಯ ಸಂರಕ್ಷಣೆ ಕುರಿತ ಸಾಕ್ಷ್ಯ ಚಿತ್ರವೊಂದರಲ್ಲಿ ನಟಿಸಿದ್ದರು. ಹಾಗಾಗಿ, ಅವರ ಹೆಸರು ನಾಮಕರಣ ಮಾಡಿದ್ದೇವೆ’ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್ ಪ್ರತಿಕ್ರಿಯಿಸಿದರು.