1,174 ಹೆಕ್ಟೇರ್ ಕೃಷಿ ಭೂಮಿಗೆ ಮರಳಿನ ತೊಡಕು: ಮರಳು ಸಂಗ್ರಹಗೊಂಡ ಕಾರಣ 1,174 ಹೆಕ್ಟೇರ್ ಕೃಷಿ ಭೂಮಿಗೆ ಧಕ್ಕೆಯಾಗಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಈ ಬಾರಿ ಆರು ಜನರು ಜೀವ ಕಳೆದುಕೊಂಡಿದ್ದಾರೆ. ಐದು ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. 126 ಮನೆಗಳು ಪೂರ್ಣ ಹಾನಿಯಾಗಿವೆ. 478 ಮನೆಗಳಿಗೆ ತೀವ್ರ ಹಾನಿ ಹಾಗೂ 532 ಮನೆಗಳು ಭಾಗಶಃ ಹಾನಿಯಾಗಿವೆ. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ₹ 1.43 ಕೋಟಿ ಪರಿಹಾರ ಒದಗಿಸಬೇಕಾಗಿದೆ. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೂ ಹಾನಿಯಾಗಿದೆ.ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 7.93 ಕೋಟಿ ಬಿಡುಗಡೆಯಾಗಿದೆ. 303 ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಮಾಹಿತಿ ನೀಡಿದರು.