‘ಲಾರಿ ಉಡುಪಿ ಜಿಲ್ಲೆ ಹೆಬ್ರಿಯಿಂದ ಬಂದಿತ್ತು. ಚಿತ್ರದುರ್ಗಕ್ಕೆ ಡಿಟೊನೇಟರ್, ಜಿಲಿಟಿನ್ ಕಡ್ಡಿ ಸರಬರಾಜು ಮಾಡಲು ತೆಗೆದುಕೊಂಡು ಹೋಗುತ್ತಿದ್ದರು. ಅಧಿಕೃತ ಪರವಾಗಿ ಇದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದಾರೆ. ಪ್ರತಿ ಸ್ಫೋಟಕ ಸಾಮಗ್ರಿಗಳನ್ನೂ ಪ್ರತ್ಯೇಕವಾಗಿ ಇರಿಸಲಾಗಿತ್ತು’ ಎಂದು ವಾಹನ ತಪಾಸಣೆ ಮಾಡಿದ ಡಿವೈಎಸ್ಪಿ ಪ್ರಶಾಂತ್ ಮುನೋಳಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.