<p><strong>ಕುಂಸಿ:</strong> ಸಾಕುನಾಯಿ ಕೊಂದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ.</p>.<p>ಸಮೀಪದ ಮಂಡಘಟ್ಟದಲ್ಲಿ ವಿಜಯ್ ಮತ್ತು ವಾಸುದೇವ್ ಅವರು ಈಚೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಅದೇ ಗ್ರಾಮದ ಹೇಮಂತ್ ಅವರು ಸಾಕಿದ್ದ ನಾಯಿ ಅಟ್ಟಿಸಿಕೊಂಡು ಬಂದಿದೆ. ಇನ್ನೇನು ಕಚ್ಚೇ ಬಿಟ್ಟಿತು ಎನ್ನುವಷ್ಟರಲ್ಲಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಮಂಡಘಟ್ಟದ ಮೂರನೇ ತಿರುವಿನಲ್ಲಿ ಎಸೆಯಲಾಗಿದೆ.</p>.<p>ವಿಷಯ ತಿಳಿದ ಹೇಮಂತ್ ಅವರು ವಿಜಯ್ ಅವರ ಮನೆಗೆ ತೆರಳಿ, ‘ನಾಯಿಯನ್ನು ಏಕೆ ಸಾಯಿಸಿದ್ದೀಯಾ’ ಎಂದು ಪ್ರಶ್ನಿಸಿದ್ದಾರೆ. ಆಗ<br />ವಿಜಯ್, ವಾಸುದೇವ್, ರಾಮಚಂದ್ರ ಮತ್ತು ಸುಲೋಚನಾ ಎಂಬುವವರು ಹೇಮಂತ್ ಮೇಲೆ ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ.</p>.<p>ಈ ವೇಳೆ ಹೇಮಂತ್ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಜಗಳ ಬಿಡಿಸಿದ್ದಾರೆ. ಗಾಯಗೊಂಡ ಹೇಮಂತ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಕುಂಸಿ ಠಾಣೆಯಲ್ಲಿ ದೂರು– ಪ್ರತಿದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂಸಿ:</strong> ಸಾಕುನಾಯಿ ಕೊಂದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ.</p>.<p>ಸಮೀಪದ ಮಂಡಘಟ್ಟದಲ್ಲಿ ವಿಜಯ್ ಮತ್ತು ವಾಸುದೇವ್ ಅವರು ಈಚೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಅದೇ ಗ್ರಾಮದ ಹೇಮಂತ್ ಅವರು ಸಾಕಿದ್ದ ನಾಯಿ ಅಟ್ಟಿಸಿಕೊಂಡು ಬಂದಿದೆ. ಇನ್ನೇನು ಕಚ್ಚೇ ಬಿಟ್ಟಿತು ಎನ್ನುವಷ್ಟರಲ್ಲಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಮಂಡಘಟ್ಟದ ಮೂರನೇ ತಿರುವಿನಲ್ಲಿ ಎಸೆಯಲಾಗಿದೆ.</p>.<p>ವಿಷಯ ತಿಳಿದ ಹೇಮಂತ್ ಅವರು ವಿಜಯ್ ಅವರ ಮನೆಗೆ ತೆರಳಿ, ‘ನಾಯಿಯನ್ನು ಏಕೆ ಸಾಯಿಸಿದ್ದೀಯಾ’ ಎಂದು ಪ್ರಶ್ನಿಸಿದ್ದಾರೆ. ಆಗ<br />ವಿಜಯ್, ವಾಸುದೇವ್, ರಾಮಚಂದ್ರ ಮತ್ತು ಸುಲೋಚನಾ ಎಂಬುವವರು ಹೇಮಂತ್ ಮೇಲೆ ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ.</p>.<p>ಈ ವೇಳೆ ಹೇಮಂತ್ ಗಾಯಗೊಂಡಿದ್ದಾರೆ. ಗ್ರಾಮಸ್ಥರು ಜಗಳ ಬಿಡಿಸಿದ್ದಾರೆ. ಗಾಯಗೊಂಡ ಹೇಮಂತ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಕುಂಸಿ ಠಾಣೆಯಲ್ಲಿ ದೂರು– ಪ್ರತಿದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>