<p><strong>ರಿಪ್ಪನ್ಪೇಟೆ:</strong> ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯ ನೀರಿಗೆ ಮೈಲುತುತ್ತದ ವಿಷ ಬೆರೆಸಿ ಜಲಚರಗಳ ಮಾರಣಹೋಮ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಬೇಸಿಗೆ ಕಾರಣದಿಂದ ನೀರು ಇಂಗಿಹೋಗಿದ್ದು, ಅಲ್ಲಲ್ಲಿ ಕೆಲ ಹೊಂಡದಲ್ಲಿ ನಿಂತ ನೀರಿನಲ್ಲಿ ಜಲಚರಗಳು ಜೀವಿಸುತ್ತವೆ. ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ ಮೈಲುತುತ್ತವನ್ನು ನೀರಿಗೆ ಬೆರೆಸಿ ಲಕ್ಷಾಂತರ ಜಲಚರಗಳ ಮಾರಣಹೋಮಕ್ಕೆ ಕಾರಣರಾಗಿದ್ದಾರೆ.</p>.<p>ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ ಹಾಗೂ ಇನ್ನಿತರ ಜೀವಿಗಳು ನದಿಯ ದಂಡೆಯ ಮೇಲೆ ಸತ್ತುಬಿದ್ದಿವೆ. ಇದನ್ನೇ ಆಹಾರವಾಗಿ ಸೇವಿಸುವ ಪಕ್ಷಿ ಸಂಕುಲಗಳು ಸಹ ಸಾಯುವ ಸಾಧ್ಯತೆ ಇದೆ. ಅಲ್ಲದೆ, ಜಾನುವಾರು, ಕಾಡುಪ್ರಾಣಿಗಳು ಈ ನೀರನ್ನು ಕುಡಿಯುವುದರಿಂದ ಅವುಗಳ ಜೀವಕ್ಕೂ ಮಾರಕವಾಗಿದೆ.</p>.<p>ಅಮೃತ ಗ್ರಾಮ ಪಂಚಾಯಿತಿ ಪಿಡಿಒ ಸುಧಾ, ‘ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪತ್ರಕರ್ತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯ ನೀರಿಗೆ ಮೈಲುತುತ್ತದ ವಿಷ ಬೆರೆಸಿ ಜಲಚರಗಳ ಮಾರಣಹೋಮ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಬೇಸಿಗೆ ಕಾರಣದಿಂದ ನೀರು ಇಂಗಿಹೋಗಿದ್ದು, ಅಲ್ಲಲ್ಲಿ ಕೆಲ ಹೊಂಡದಲ್ಲಿ ನಿಂತ ನೀರಿನಲ್ಲಿ ಜಲಚರಗಳು ಜೀವಿಸುತ್ತವೆ. ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ ಮೈಲುತುತ್ತವನ್ನು ನೀರಿಗೆ ಬೆರೆಸಿ ಲಕ್ಷಾಂತರ ಜಲಚರಗಳ ಮಾರಣಹೋಮಕ್ಕೆ ಕಾರಣರಾಗಿದ್ದಾರೆ.</p>.<p>ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ ಹಾಗೂ ಇನ್ನಿತರ ಜೀವಿಗಳು ನದಿಯ ದಂಡೆಯ ಮೇಲೆ ಸತ್ತುಬಿದ್ದಿವೆ. ಇದನ್ನೇ ಆಹಾರವಾಗಿ ಸೇವಿಸುವ ಪಕ್ಷಿ ಸಂಕುಲಗಳು ಸಹ ಸಾಯುವ ಸಾಧ್ಯತೆ ಇದೆ. ಅಲ್ಲದೆ, ಜಾನುವಾರು, ಕಾಡುಪ್ರಾಣಿಗಳು ಈ ನೀರನ್ನು ಕುಡಿಯುವುದರಿಂದ ಅವುಗಳ ಜೀವಕ್ಕೂ ಮಾರಕವಾಗಿದೆ.</p>.<p>ಅಮೃತ ಗ್ರಾಮ ಪಂಚಾಯಿತಿ ಪಿಡಿಒ ಸುಧಾ, ‘ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಪತ್ರಕರ್ತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>