ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ:ರೌಡಿಶೀಟರ್‌ ದೀಪುಗೆ ಪೊಲೀಸರ ಗುಂಡೇಟು

Last Updated 19 ಫೆಬ್ರುವರಿ 2021, 15:23 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ಅನುಪಿನಕಟ್ಟೆ ಬಳಿ ಶುಕ್ರವಾರ ರೌಡಿಶೀಟರ್‌ ದೀಪು ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ವರಪ್ಪನ ಅಗ್ರಹಾರದಲ್ಲಿರುವ ರೌಡಿ ಬಚ್ಚನ್ ತನ್ನ ಸಹಚರರ ಮೂಲಕ ಶಿವಮೊಗ್ಗದ ವ್ಯಾಪಾರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು. ಹಣಕೊಡದೇ ವ್ಯಾಪಾರಿ ಪೊಲೀಸರಿಗೆ ದೂರು ನೀಡಿದ್ದ ಕಾರಣ ಕುಪಿತಗೊಂಡ ಆತನ ತಂಡ ಅವರ ಮೇಲೆ ಹಲ್ಲೆ ನಡೆಸಿತ್ತು. ಈ ಗುಂಪಿನ ನೇತೃತ್ವ ವಹಿಸಿದ್ದ ದೀಪುವನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ತುಂಗಾನಗರ ಇನ್‌ಸ್ಪೆಕ್ಟರ್ ದೀಪಕ್ ರಿವಾಲ್ವಾರ್‌ನಿಂದ ಕಾಲಿಗೆ ಗುಂಡು ಹಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT