<p><strong>ಸಾಗರ:</strong> ಕಾನೂನಿನ ನಿಯಮಗಳನ್ನು ಪಾಲಿಸಿ ಅವುಗಳ ಚೌಕಟ್ಟಿನೊಳಗೆ ಹಬ್ಬಗಳನ್ನು ಆಚರಿಸುವ ಯಾರಿಗೇ ಆದರೂ ಪೊಲೀಸ್ ಇಲಾಖೆಯ ಬೆಂಬಲ ಸದಾ ಇರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದರು.</p>.<p>ಗೌರಿ– ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಇಲ್ಲಿನ ಶಾರದಾಂಬಾ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಬ್ಬದ ಆಚರಣೆಯಲ್ಲಿ ಪ್ರತಿಯೊಬ್ಬರೂ ಸಂಭ್ರಮದಿಂದಲೇ ಪಾಲ್ಗೊಳ್ಳಬೇಕು. ಇದೇ ಹೊತ್ತಿಗೆ ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳುವತ್ತ ಗಮನ ನೀಡಬೇಕು. ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಿಸುವ ಸಂದರ್ಭದಲ್ಲಿ ಯಾವುದೇ ವಿವಾದಕ್ಕೆ ಅವಕಾಶವಿರಬಾರದು ಎಂದು ಕಿವಿಮಾತು ಹೇಳಿದರು.</p>.<p>‘ಹಬ್ಬಗಳ ಆಚರಣೆ ಸಂದರ್ಭದಲ್ಲಿ ಗಣಪತಿ ಪೆಂಡಾಲ್ನಲ್ಲಿ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. ಪೊಲೀಸ್ ಇಲಾಖೆ ಜೊತೆ ಸಹಕರಿಸುವ ಮೂಲಕ ಹಬ್ಬದ ಆಚರಣೆಯನ್ನು ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಎಎಸ್ಪಿ ಬೆನಕ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್, ಮಹಾಬಲೇಶ್ವರ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಕಾನೂನಿನ ನಿಯಮಗಳನ್ನು ಪಾಲಿಸಿ ಅವುಗಳ ಚೌಕಟ್ಟಿನೊಳಗೆ ಹಬ್ಬಗಳನ್ನು ಆಚರಿಸುವ ಯಾರಿಗೇ ಆದರೂ ಪೊಲೀಸ್ ಇಲಾಖೆಯ ಬೆಂಬಲ ಸದಾ ಇರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದರು.</p>.<p>ಗೌರಿ– ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಇಲ್ಲಿನ ಶಾರದಾಂಬಾ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಬ್ಬದ ಆಚರಣೆಯಲ್ಲಿ ಪ್ರತಿಯೊಬ್ಬರೂ ಸಂಭ್ರಮದಿಂದಲೇ ಪಾಲ್ಗೊಳ್ಳಬೇಕು. ಇದೇ ಹೊತ್ತಿಗೆ ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳುವತ್ತ ಗಮನ ನೀಡಬೇಕು. ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಿಸುವ ಸಂದರ್ಭದಲ್ಲಿ ಯಾವುದೇ ವಿವಾದಕ್ಕೆ ಅವಕಾಶವಿರಬಾರದು ಎಂದು ಕಿವಿಮಾತು ಹೇಳಿದರು.</p>.<p>‘ಹಬ್ಬಗಳ ಆಚರಣೆ ಸಂದರ್ಭದಲ್ಲಿ ಗಣಪತಿ ಪೆಂಡಾಲ್ನಲ್ಲಿ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. ಪೊಲೀಸ್ ಇಲಾಖೆ ಜೊತೆ ಸಹಕರಿಸುವ ಮೂಲಕ ಹಬ್ಬದ ಆಚರಣೆಯನ್ನು ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಎಎಸ್ಪಿ ಬೆನಕ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್, ಮಹಾಬಲೇಶ್ವರ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>