<p><strong>ಸಾಗರ: </strong>ಕೊರೊನಾ ಕಾಲದಲ್ಲೂ ಊರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿರುವ ಪೌರಕಾರ್ಮಿಕರ ಸೇವೆ ಅನನ್ಯ. ಅವರು ನಿಜವಾದ ಅರ್ಥದಲ್ಲಿ ಕೊರೊನಾ ವಾರಿಯರ್ಸ್ ಎಂದು ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್. ಹೇಳಿದರು.</p>.<p>ಇಲ್ಲಿನ ನಗರಸಭೆ ಆವರಣದಲ್ಲಿ ಪೌರಸೇವಾ ನೌಕರರ ಸಂಘ ಹಾಗೂ ನಗರಸಭೆ ಕಚೇರಿ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಗೌರವಿಸಿ ಮಾತನಾಡಿದರು.</p>.<p>‘ಕೊರೊನಾ ಕಾರಣಕ್ಕೆ ಹಲವು ಇಲಾಖೆಗಳ ನೌಕರರು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲೂ ಪೌರಕಾರ್ಮಿಕರು ತಪ್ಪದೆ ಕೆಲಸ ಮಾಡಿದ್ದಾರೆ ಎನ್ನುವುದನ್ನು ಸಮಾಜ ಗುರುತಿಸಬೇಕಿದೆ’ ಎಂದರು.</p>.<p>‘ಪೌರಕಾರ್ಮಿಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗುತ್ತಿಗೆ ಆಧಾರಿತ ಪೌರಕಾರ್ಮಿಕರ ಬೇಡಿಕೆಗಳ ಪಟ್ಟಿ ದೊಡ್ಡದಿದೆ. ಅವರ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p>.<p>ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ‘ಪ್ರತಿವರ್ಷ ಪೌರಕಾರ್ಮಿಕರ ದಿನಾಚರಣೆಯನ್ನು ಮೆರವಣಿಗೆಯ ಮೂಲಕ ಹಬ್ಬದಂತೆ ಆಚರಿಸಲಾಗುತ್ತಿತ್ತು. ಈ ವರ್ಷ ಕೊರೊನಾ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ. ಸದಾ ತೆರೆಮರೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಯಾವತ್ತೂ ಸಮಾಜದ ಮುಖ್ಯವಾಹಿನಿಗೆ ಬರಲು ಬಯಸುವುದಿಲ್ಲ. ಅವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದರು.</p>.<p>ಪೌರ ಕಾರ್ಮಿಕರ ಮಕ್ಕಳು ಕೂಡ ಈಚಿನ ದಿನಗಳಲ್ಲಿ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಎಂದು ಹೇಳಿದರು.</p>.<p>ಪರಿಸರ ಎಂಜಿನಿಯರ್ ಪ್ರಭಾಕರ್, ಕಂದಾಯ ಅಧಿಕಾರಿ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್, ರಚನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಕೊರೊನಾ ಕಾಲದಲ್ಲೂ ಊರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿರುವ ಪೌರಕಾರ್ಮಿಕರ ಸೇವೆ ಅನನ್ಯ. ಅವರು ನಿಜವಾದ ಅರ್ಥದಲ್ಲಿ ಕೊರೊನಾ ವಾರಿಯರ್ಸ್ ಎಂದು ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್. ಹೇಳಿದರು.</p>.<p>ಇಲ್ಲಿನ ನಗರಸಭೆ ಆವರಣದಲ್ಲಿ ಪೌರಸೇವಾ ನೌಕರರ ಸಂಘ ಹಾಗೂ ನಗರಸಭೆ ಕಚೇರಿ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಗೌರವಿಸಿ ಮಾತನಾಡಿದರು.</p>.<p>‘ಕೊರೊನಾ ಕಾರಣಕ್ಕೆ ಹಲವು ಇಲಾಖೆಗಳ ನೌಕರರು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲೂ ಪೌರಕಾರ್ಮಿಕರು ತಪ್ಪದೆ ಕೆಲಸ ಮಾಡಿದ್ದಾರೆ ಎನ್ನುವುದನ್ನು ಸಮಾಜ ಗುರುತಿಸಬೇಕಿದೆ’ ಎಂದರು.</p>.<p>‘ಪೌರಕಾರ್ಮಿಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗುತ್ತಿಗೆ ಆಧಾರಿತ ಪೌರಕಾರ್ಮಿಕರ ಬೇಡಿಕೆಗಳ ಪಟ್ಟಿ ದೊಡ್ಡದಿದೆ. ಅವರ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p>.<p>ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ‘ಪ್ರತಿವರ್ಷ ಪೌರಕಾರ್ಮಿಕರ ದಿನಾಚರಣೆಯನ್ನು ಮೆರವಣಿಗೆಯ ಮೂಲಕ ಹಬ್ಬದಂತೆ ಆಚರಿಸಲಾಗುತ್ತಿತ್ತು. ಈ ವರ್ಷ ಕೊರೊನಾ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ. ಸದಾ ತೆರೆಮರೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಯಾವತ್ತೂ ಸಮಾಜದ ಮುಖ್ಯವಾಹಿನಿಗೆ ಬರಲು ಬಯಸುವುದಿಲ್ಲ. ಅವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದರು.</p>.<p>ಪೌರ ಕಾರ್ಮಿಕರ ಮಕ್ಕಳು ಕೂಡ ಈಚಿನ ದಿನಗಳಲ್ಲಿ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಆರೋಗ್ಯಕರ ಬೆಳವಣಿಗೆ ಎಂದು ಹೇಳಿದರು.</p>.<p>ಪರಿಸರ ಎಂಜಿನಿಯರ್ ಪ್ರಭಾಕರ್, ಕಂದಾಯ ಅಧಿಕಾರಿ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಶೈಲೇಶ್, ರಚನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>