ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ‘ಪ್ರತಿವರ್ಷ ಪೌರಕಾರ್ಮಿಕರ ದಿನಾಚರಣೆಯನ್ನು ಮೆರವಣಿಗೆಯ ಮೂಲಕ ಹಬ್ಬದಂತೆ ಆಚರಿಸಲಾಗುತ್ತಿತ್ತು. ಈ ವರ್ಷ ಕೊರೊನಾ ಕಾರಣಕ್ಕೆ ಸರಳವಾಗಿ ಆಚರಿಸಲಾಗುತ್ತಿದೆ. ಸದಾ ತೆರೆಮರೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಯಾವತ್ತೂ ಸಮಾಜದ ಮುಖ್ಯವಾಹಿನಿಗೆ ಬರಲು ಬಯಸುವುದಿಲ್ಲ. ಅವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದರು.