<p><strong>ಹೊಸನಗರ: </strong>ಶುಕ್ರವಾರ ಕಾಣೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಮೃತದೇಹ ಇಂದು ತಾಲ್ಲೂಕಿನ ಪಟಗುಪ್ಪ ಸೇತುವೆಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.</p>.<p>ಮೃತದೇಹವನ್ನು ಶವ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಶವಪರೀಕ್ಷೆ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶುಕ್ರವಾರ ಪ್ರಕಾಶ್ ಅವರು ಕಾಣದಿದ್ದಾಗ ಮನೆಯವರು ಆತಂಕಗೊಂಡು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಬಳಿಕ ಅವರ ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿದಾಗ ಅದು ಪಟಗುಪ್ಪ ಸೇತುವೆ ಬಳಿ ತೋರಿಸಿತ್ತು.ಅಲ್ಲಿ ಶೋಧ ನಡೆಸಿದಾಗ ಅವರ ಕಾರು ಹಾಗೂ ಮೊಬೈಲ್ ಪಟಗುಪ್ಪ ಸೇತುವೆಯ ಬಳಿಪತ್ತೆಯಾಗಿತ್ತು.</p>.<p>ಹೊಸನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ನಿರಂತರ ಶೋಧ ಕಾರ್ಯ ನಡೆಸಿದ್ದರು. ಸೋಮವಾರ ಮುಂಜಾನೆ ಅವರ ಮೃತದೇಹ ಪಟಗುಪ್ಪ ಸೇತುವೆ ಹಿನ್ನೀರಿನಲ್ಲಿ ಪತ್ತೆಯಾಗಿದೆ.</p>.<p class="Subhead"><strong>ತನಿಖೆಗೆ ಒತ್ತಾಯ:</strong> ‘ಪ್ರಕಾಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ. ಸೇತುವೆಯ ಬಳಿ ಅವರನ್ನು ಬರುವಂತೆ ಮಾಡಿ ನಂತರ ಇಲ್ಲಿ ಕೊಲೆ ಮಾಡಿರಬಹುದು’ ಎಂದುಅವರ ಕುಟುಂಬಸ್ಥರು ಹಾಗೂ ಆಪ್ತರು ಅನುಮಾನವ್ಯಕ್ತಪಡಿಸಿದ್ದಾರೆ.</p>.<p>ಶೀಘ್ರ ಈ ಬಗ್ಗೆ ತನಿಖೆ ನಡೆಸಿ ಅವರ ಸಾವಿಗೆ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ: </strong>ಶುಕ್ರವಾರ ಕಾಣೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರ ಮೃತದೇಹ ಇಂದು ತಾಲ್ಲೂಕಿನ ಪಟಗುಪ್ಪ ಸೇತುವೆಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.</p>.<p>ಮೃತದೇಹವನ್ನು ಶವ ಪರೀಕ್ಷೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಶವಪರೀಕ್ಷೆ ನಂತರವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶುಕ್ರವಾರ ಪ್ರಕಾಶ್ ಅವರು ಕಾಣದಿದ್ದಾಗ ಮನೆಯವರು ಆತಂಕಗೊಂಡು ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಬಳಿಕ ಅವರ ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿದಾಗ ಅದು ಪಟಗುಪ್ಪ ಸೇತುವೆ ಬಳಿ ತೋರಿಸಿತ್ತು.ಅಲ್ಲಿ ಶೋಧ ನಡೆಸಿದಾಗ ಅವರ ಕಾರು ಹಾಗೂ ಮೊಬೈಲ್ ಪಟಗುಪ್ಪ ಸೇತುವೆಯ ಬಳಿಪತ್ತೆಯಾಗಿತ್ತು.</p>.<p>ಹೊಸನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ನಿರಂತರ ಶೋಧ ಕಾರ್ಯ ನಡೆಸಿದ್ದರು. ಸೋಮವಾರ ಮುಂಜಾನೆ ಅವರ ಮೃತದೇಹ ಪಟಗುಪ್ಪ ಸೇತುವೆ ಹಿನ್ನೀರಿನಲ್ಲಿ ಪತ್ತೆಯಾಗಿದೆ.</p>.<p class="Subhead"><strong>ತನಿಖೆಗೆ ಒತ್ತಾಯ:</strong> ‘ಪ್ರಕಾಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ. ಸೇತುವೆಯ ಬಳಿ ಅವರನ್ನು ಬರುವಂತೆ ಮಾಡಿ ನಂತರ ಇಲ್ಲಿ ಕೊಲೆ ಮಾಡಿರಬಹುದು’ ಎಂದುಅವರ ಕುಟುಂಬಸ್ಥರು ಹಾಗೂ ಆಪ್ತರು ಅನುಮಾನವ್ಯಕ್ತಪಡಿಸಿದ್ದಾರೆ.</p>.<p>ಶೀಘ್ರ ಈ ಬಗ್ಗೆ ತನಿಖೆ ನಡೆಸಿ ಅವರ ಸಾವಿಗೆ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>