ಶಿವಮೊಗ್ಗ ಕಮಿಷನರೇಟ್ ಕಷ್ಟ: ‘ಶಿವಮೊಗ್ಗಕ್ಕೆ ಕಮಿಷನರೇಟ್ ಮಂಜೂರು ಮಾಡಲು ಕನಿಷ್ಠ 10 ಲಕ್ಷ ಜನಸಂಖ್ಯೆ ಇರಬೇಕು. ಈ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಜಿಲ್ಲೆಯಲ್ಲಿ ಕೆಲವು ಸಮಸ್ಯೆಗಳಿವೆ. ಇನ್ನಷ್ಟು ಸಿಬ್ಬಂದಿ, ವಸತಿಗೃಹಗಳ ಅಗತ್ಯವಿದೆ. ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಹಲವು ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೆಚ್ಚುವರಿ ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗಿದೆ. ಹಾಗಾಗಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ ಸುಲಭವಾಗಲಿದೆ. ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಪೂರೈಸಲು ಸೂಚಿಸಲಾಗಿದೆ. ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ’ ಎಂದರು.