<p><strong>ಸೊರಬ</strong>: ಸರ್ಕಾರ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಮುಂದಾಗಿದ್ದು, 2ನೇ ಡೋಸ್ ಪಡೆದು 9 ತಿಂಗಳಾದವರು ಲಸಿಕೆ ಪಡೆಯಬೇಕು ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಕೆ. ಸಾಹುಕಾರ್ ಹೇಳಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕಾರ್ಯಪಡೆ ಹಾಗೂ ಸೊರಬ ಆರೋಗ್ಯಾಧಿಕಾರಿಗಳ ಕಚೇರಿಯಿಂದ ನಡೆದ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನರು ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಖಗವಸು, ಸ್ಯಾನಿಟೈಸರ್ ಬಳಸುವ ಜತೆಗೆ ಅಂತರ ಕಾಯ್ದುಕೊಳ್ಳಬೇಕು. ಲಸಿಕೆ ಪಡೆಯದವರು ಕಡ್ಡಾಯವಾಗಿ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ ಪಾಟೇಲ್ ಮಾತನಾಡಿ, ‘ಕೊರೊನಾಗೆ ಎದೆಗುಂದದೆಉತ್ತಮ ಆಹಾರ ಹಾಗೂ ಜೀವನ ಕ್ರಮ ಹೊಂದುವ ಜತೆಗೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಲಸಿಕೆ ನೀಡಿದ್ದರಿಂದ ಗುಣಮುಖವಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ತಾಲ್ಲೂಕಿನಲ್ಲಿ 8 ಸಾವಿರವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಲಾಗಿದೆ’ ಎಂದುತಿಳಿಸಿದರು.</p>.<p>ಕಾರ್ಯಕ್ರಮಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ ನೀಡಿದರು. ತಹಶೀಲ್ದಾರ್ ಶಿವಾನಂದ ಪಿ.ರಾಣೆ, ಪುರಸಭೆ ಮುಖ್ಯಾಧಿಕಾರಿ ಡಿ.ಮಹೇಂದ್ರ, ಸದಸ್ಯ ಎಂ.ಡಿ.ಉಮೇಶ್, ಆರಾಧನಾ ಸಮಿತಿ ಸದಸ್ಯ ಅಶೋಕ್ ಶೇಟ್, ಡಾ.ಸತೀಶ್, ಶಿಲ್ಪಾ ಕಾನಡೆ ಸೇರಿ ವೈದ್ಯರು, ಆರೋಗ್ಯ ಸಹಾಯಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ</strong>: ಸರ್ಕಾರ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಮುಂದಾಗಿದ್ದು, 2ನೇ ಡೋಸ್ ಪಡೆದು 9 ತಿಂಗಳಾದವರು ಲಸಿಕೆ ಪಡೆಯಬೇಕು ಎಂದು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಕೆ. ಸಾಹುಕಾರ್ ಹೇಳಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕಾರ್ಯಪಡೆ ಹಾಗೂ ಸೊರಬ ಆರೋಗ್ಯಾಧಿಕಾರಿಗಳ ಕಚೇರಿಯಿಂದ ನಡೆದ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನರು ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಖಗವಸು, ಸ್ಯಾನಿಟೈಸರ್ ಬಳಸುವ ಜತೆಗೆ ಅಂತರ ಕಾಯ್ದುಕೊಳ್ಳಬೇಕು. ಲಸಿಕೆ ಪಡೆಯದವರು ಕಡ್ಡಾಯವಾಗಿ ಪಡೆಯಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ ಪಾಟೇಲ್ ಮಾತನಾಡಿ, ‘ಕೊರೊನಾಗೆ ಎದೆಗುಂದದೆಉತ್ತಮ ಆಹಾರ ಹಾಗೂ ಜೀವನ ಕ್ರಮ ಹೊಂದುವ ಜತೆಗೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಲಸಿಕೆ ನೀಡಿದ್ದರಿಂದ ಗುಣಮುಖವಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ತಾಲ್ಲೂಕಿನಲ್ಲಿ 8 ಸಾವಿರವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಲಾಗಿದೆ’ ಎಂದುತಿಳಿಸಿದರು.</p>.<p>ಕಾರ್ಯಕ್ರಮಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ ನೀಡಿದರು. ತಹಶೀಲ್ದಾರ್ ಶಿವಾನಂದ ಪಿ.ರಾಣೆ, ಪುರಸಭೆ ಮುಖ್ಯಾಧಿಕಾರಿ ಡಿ.ಮಹೇಂದ್ರ, ಸದಸ್ಯ ಎಂ.ಡಿ.ಉಮೇಶ್, ಆರಾಧನಾ ಸಮಿತಿ ಸದಸ್ಯ ಅಶೋಕ್ ಶೇಟ್, ಡಾ.ಸತೀಶ್, ಶಿಲ್ಪಾ ಕಾನಡೆ ಸೇರಿ ವೈದ್ಯರು, ಆರೋಗ್ಯ ಸಹಾಯಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>