<p><strong>ಸಾಗರ</strong>: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ತಾಲ್ಲೂಕಿನ ಭೀಮನಕೋಣೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಸಿದುಹೋಗಿದ್ದ ಹರಡವಡಿಕೆ–ಭೀಮನಕೋಣೆ-ಹೆಗ್ಗೋಡು ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕಳೆದ ಮಳೆಗಾಲದಲ್ಲಿ ಸುರಿದ ವಿಪರೀತ ಮಳೆಯಿಂದ ಭೀಮನಕೋಣೆ-ಹೆಗ್ಗೋಡಿನ ಮುಂಗರವಳ್ಳಿಯ ಸೇತುವೆ ಒಂದು ಭಾಗ ಕುಸಿದು ಹೋಗಿತ್ತು. ಸೇತುವೆ ಅಪಾಯದ ಸ್ಥಿತಿಯಲ್ಲಿರುವುದರಿಂದ ಗ್ರಾಮಸ್ಥರ ಕೋರಿಕೆ ಮೇರೆಗೆ ₹ 50 ಲಕ್ಷ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕೋವಿಡ್ ಕಾರಣಕ್ಕೆ ಸರ್ಕಾರ<br />ದಿಂದ ಅನುದಾನ ಬರುವುದು ವಿಳಂಬವಾದ್ದರಿಂದ ಕೆಲವು ಕಾಮಗಾರಿಗಳಿಗೆ ಅಡ್ಡಿಯುಂಟಾಗಿತ್ತು. ಈಗ ಅನುದಾನ ಬಿಡುಗಡೆಯಾಗುತ್ತಿದ್ದು, ಅಗತ್ಯವಿರುವ ಕಡೆ ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.</p>.<p>ಭೀಮನಕೋಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೋಹನ್, ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ, ಸದಸ್ಯರಾದ ಕೇಶವ, ರಾಜೇಶ್ ಮಾವಿನಸರ, ಎಂ.ಎಸ್. ನಾಗರಾಜ್, ಮಲೆನಾಡು ಪ್ರದೇಶಾಭಿವೃದ್ಧಿ ಸದಸ್ಯ ಬಿ.ಎಚ್. ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ತಾಲ್ಲೂಕಿನ ಭೀಮನಕೋಣೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಸಿದುಹೋಗಿದ್ದ ಹರಡವಡಿಕೆ–ಭೀಮನಕೋಣೆ-ಹೆಗ್ಗೋಡು ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಕಳೆದ ಮಳೆಗಾಲದಲ್ಲಿ ಸುರಿದ ವಿಪರೀತ ಮಳೆಯಿಂದ ಭೀಮನಕೋಣೆ-ಹೆಗ್ಗೋಡಿನ ಮುಂಗರವಳ್ಳಿಯ ಸೇತುವೆ ಒಂದು ಭಾಗ ಕುಸಿದು ಹೋಗಿತ್ತು. ಸೇತುವೆ ಅಪಾಯದ ಸ್ಥಿತಿಯಲ್ಲಿರುವುದರಿಂದ ಗ್ರಾಮಸ್ಥರ ಕೋರಿಕೆ ಮೇರೆಗೆ ₹ 50 ಲಕ್ಷ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕೋವಿಡ್ ಕಾರಣಕ್ಕೆ ಸರ್ಕಾರ<br />ದಿಂದ ಅನುದಾನ ಬರುವುದು ವಿಳಂಬವಾದ್ದರಿಂದ ಕೆಲವು ಕಾಮಗಾರಿಗಳಿಗೆ ಅಡ್ಡಿಯುಂಟಾಗಿತ್ತು. ಈಗ ಅನುದಾನ ಬಿಡುಗಡೆಯಾಗುತ್ತಿದ್ದು, ಅಗತ್ಯವಿರುವ ಕಡೆ ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.</p>.<p>ಭೀಮನಕೋಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೋಹನ್, ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ, ಸದಸ್ಯರಾದ ಕೇಶವ, ರಾಜೇಶ್ ಮಾವಿನಸರ, ಎಂ.ಎಸ್. ನಾಗರಾಜ್, ಮಲೆನಾಡು ಪ್ರದೇಶಾಭಿವೃದ್ಧಿ ಸದಸ್ಯ ಬಿ.ಎಚ್. ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>