ಕರ್ನಾಟಕದಲ್ಲಿ ಕ್ರೀಡಾ ಚಟುವಟಿಕೆಗೆ ಪೂರಕವಾದ ವಾತಾವರಣವಿದೆ. ಕ್ರೀಡಾ ಚಟುವಟಿಕೆ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಮುಂದಿಟ್ಟಿರುವ ಎಲ್ಲ ಬೇಡಿಕೆ ಈಡೇರಿಸಲಾಗುತ್ತಿದೆ. ಮುಂದಿನ ಒಲಿಂಪಿಕ್ನಲ್ಲಿ ಕರ್ನಾಟಕದ ಕ್ರೀಡಾಪಟುಗಳೂ ಹೆಚ್ಚಿನ ಚಿನ್ನದ ಪದಕದ ಗೆಲ್ಲಬೇಕು ಎನ್ನುವ ನಿರೀಕ್ಷೆ ಇದೆ. ಶಿವಮೊಗ್ಗ ಜಿಲ್ಲೆಯನ್ನೂ ದೇಶದ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ನೆರವು ನೀಡಲಾಗುವುದು.ಖೇಲೊ ಇಂಡಿಯಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.