<p><strong>ಶಿವಮೊಗ್ಗ:</strong>ಯಾವುದೇ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವುದು ನಟರ ವೈಯಕ್ತಿಕ ವಿಚಾರ. ಆದರೆ, ವಿವಾದಕ್ಕೆ ಆಸ್ಪದ ನೀಡದಂತೆ ಹುಷಾರಾಗಿ ಮಾತನಾಡಬೇಕು ಎಂದು ನಟ ಶಿವರಾಜ್ಕುಮಾರ್ ಕಿವಿಮಾತು ಹೇಳಿದರು.</p>.<p>ಶಿವಮೊಗ್ಗದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಮಂಡ್ಯ ಚುನಾವಣಾ ಪ್ರಚಾರದ ಹೇಳಿಕೆಗಳನ್ನು ಗಮನಿಸಿಲ್ಲ. ರಾಜಕೀಯ ಸುದ್ದಿಗಳನ್ನು ನೋಡುವುದೂ ಇಲ್ಲ. ಮತ್ತೊಬ್ಬರು ಹೀಗೆ ಮಾತನಾಡಬೇಕು. ಹಾಗೆ ಮಾತನಾಡಬೇಕು ಎಂದು ಸಲಹೆ ನೀಡಲು ಬಯಸುವುದೂ ಇಲ್ಲ. ಎಲ್ಲ ಪಕ್ಷಗಳಲ್ಲಿಯೂ ನನಗೆ ಉತ್ತಮ ಸ್ನೇಹಿತರು ಇದ್ದಾರೆ ಎಂದರು.</p>.<p>ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಒಳ್ಳೆಯ ಮನುಷ್ಯ. ಪರೋಪಕಾರಿ. ಕಷ್ಟದಲ್ಲಿ ಇರುವವರ ಕಂಡು ಸದಾ ಮರುಗುತ್ತಾರೆ. ಉತ್ತಮ ಒಡನಾಡಿ. ಕ್ಷೇತ್ರದ ಜನರು ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕವಚ’ ತಮ್ಮ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾ. ದೈಹಿಕ ನ್ಯೂನತೆ ಇರುವವರನ್ನು ಕಡೆಗಣಿಸಬಾರದು ಎಂಬ ಸಂದೇಶ ಈ ಚಿತ್ರದ ಮೂಲಕ ನೀಡಲಾಗಿದೆ. ಕಮರ್ಷಿಲ್ ಚಿತ್ರವಾದರೂ, ಕಲಾತ್ಮಕ ಸ್ಪರ್ಶವಿದೆ. ಚುನಾವಣೆ ಇದ್ದರೂ ಜನರು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಈ ಚಿತ್ರದ ನಂತರ ಇನ್ನಷ್ಟು ಸವಾಲಿನ ಪಾತ್ರ ನಿರ್ವಹಿಸಬಹುದು ಎಂಬ ಆತ್ಮವಿಶ್ವಾಸ ಮೂಡಿದೆ ಎಂದು ಅಭಿಪ್ರಾಯ ಹಂಚಿಕೊಂಡರು.</p>.<p>ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೀತಾ ಶಿವರಾಜ್ಕುಮಾರ್, ರಾಮಮಂದಿರ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ನಂತಹ ಭಾವನಾತ್ಮಕ ವಿಚಾರಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದುಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಯಾವುದೇ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವುದು ನಟರ ವೈಯಕ್ತಿಕ ವಿಚಾರ. ಆದರೆ, ವಿವಾದಕ್ಕೆ ಆಸ್ಪದ ನೀಡದಂತೆ ಹುಷಾರಾಗಿ ಮಾತನಾಡಬೇಕು ಎಂದು ನಟ ಶಿವರಾಜ್ಕುಮಾರ್ ಕಿವಿಮಾತು ಹೇಳಿದರು.</p>.<p>ಶಿವಮೊಗ್ಗದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಮಂಡ್ಯ ಚುನಾವಣಾ ಪ್ರಚಾರದ ಹೇಳಿಕೆಗಳನ್ನು ಗಮನಿಸಿಲ್ಲ. ರಾಜಕೀಯ ಸುದ್ದಿಗಳನ್ನು ನೋಡುವುದೂ ಇಲ್ಲ. ಮತ್ತೊಬ್ಬರು ಹೀಗೆ ಮಾತನಾಡಬೇಕು. ಹಾಗೆ ಮಾತನಾಡಬೇಕು ಎಂದು ಸಲಹೆ ನೀಡಲು ಬಯಸುವುದೂ ಇಲ್ಲ. ಎಲ್ಲ ಪಕ್ಷಗಳಲ್ಲಿಯೂ ನನಗೆ ಉತ್ತಮ ಸ್ನೇಹಿತರು ಇದ್ದಾರೆ ಎಂದರು.</p>.<p>ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಒಳ್ಳೆಯ ಮನುಷ್ಯ. ಪರೋಪಕಾರಿ. ಕಷ್ಟದಲ್ಲಿ ಇರುವವರ ಕಂಡು ಸದಾ ಮರುಗುತ್ತಾರೆ. ಉತ್ತಮ ಒಡನಾಡಿ. ಕ್ಷೇತ್ರದ ಜನರು ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಕವಚ’ ತಮ್ಮ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾ. ದೈಹಿಕ ನ್ಯೂನತೆ ಇರುವವರನ್ನು ಕಡೆಗಣಿಸಬಾರದು ಎಂಬ ಸಂದೇಶ ಈ ಚಿತ್ರದ ಮೂಲಕ ನೀಡಲಾಗಿದೆ. ಕಮರ್ಷಿಲ್ ಚಿತ್ರವಾದರೂ, ಕಲಾತ್ಮಕ ಸ್ಪರ್ಶವಿದೆ. ಚುನಾವಣೆ ಇದ್ದರೂ ಜನರು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಈ ಚಿತ್ರದ ನಂತರ ಇನ್ನಷ್ಟು ಸವಾಲಿನ ಪಾತ್ರ ನಿರ್ವಹಿಸಬಹುದು ಎಂಬ ಆತ್ಮವಿಶ್ವಾಸ ಮೂಡಿದೆ ಎಂದು ಅಭಿಪ್ರಾಯ ಹಂಚಿಕೊಂಡರು.</p>.<p>ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೀತಾ ಶಿವರಾಜ್ಕುಮಾರ್, ರಾಮಮಂದಿರ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ನಂತಹ ಭಾವನಾತ್ಮಕ ವಿಚಾರಗಳನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದುಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>