ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಜಿಲ್ಲೆಯ ಕೈಗಾರಿಕೆಗಳಲ್ಲಿ ಒಂದಾದ ವಿಐಎಸ್ಎಲ್ ಮುಚ್ಚುವ ಅಥವಾ ಖಾಸಗೀಕರಣಗೊಳಿಸಲು ಜಿಲ್ಲಾ ಬಿಜೆಪಿ ಬೆಂಬಲ ನೀಡುವುದಿಲ್ಲ. ಕೈಗಾರಿಕೆಯನ್ನು ಉಳಿಸಲು ಹೋರಾಟ ನಡೆಸುತ್ತದೆ. ಕೇಂದ್ರ ಸರ್ಕಾರ 1,500 ಕೋಟಿ ಬಂಡವಾಳ ಹೂಡಿದರೆ ಕಾರ್ಖಾನೆ ಸಹಜ ಸ್ಥಿತಿಗೆ ಬರುತ್ತದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಈಗಾಗಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಎಂದು ವಿವರ ನೀಡಿದರು.