ಅತಿವೃಷ್ಟಿ, ಪ್ರವಾಹದಿಂದ ಉಂಟಾಗಿರುವ ಹಾನಿಯ ಅಂದಾಜು ಸಿದ್ಧಪಡಿಸಲಾಗುತ್ತಿದೆ. ಪರಿಹಾರ, ಪುನರ್ವಸತಿ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ಜಿಲ್ಲೆಯ ಸುಮಾರು 5,500 ಕುಟುಂಬಗಳು ಈ ಬಾರಿ ಸಂಕಷ್ಟಕ್ಕೆ ಸಿಲುಕಿವೆ. 2,400ಕುಟುಂಬಗಳಿಗೆ ತುರ್ತು ಪರಿಹಾರದ ರೂಪದಲ್ಲಿ ತಲಾ ₨ 10ಸಾವಿರ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.