ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ವರಿಷ್ಠರಲ್ಲಿ ಜಿಲ್ಲೆಯ ಎಲ್ಲಾ ವಿಷಯ ಮನದಟ್ಟು ಮಾಡಿಕೊಡಲಾಗಿತ್ತು. ಅಂತಿಮವಾಗಿ ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಉಪ ಚುನಾವಣೆ ಜಿಲ್ಲೆಯ ಜನರಿಗೆ, ರಾಜಕೀಯ ಪಕ್ಷಗಳಿಗೆ ಬೇಕಾಗಿರಲಿಲ್ಲ. ಸಂಸದರಾಗಿ ಬಿ.ಎಸ್.ಯಡಿಯೂರಪ್ಪ ಅವರು 5ವರ್ಷ ಪೂರ್ಣಗೊಳಿಸಬೇಕಾಗಿತ್ತು. ಆದರೆ, ಮುಖ್ಯಮಂತ್ರಿ ಕುರ್ಚಿ ಆಸೆಗಾಗಿ ಸಂಸದ ಸ್ಥಾಪಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊಣೆ ಯಡಿಯೂರಪ್ಪ ಹಾಗೂ ಬಿಜೆಪಿ ಹೊರಬೇಕು ಎಂದರು.