ಸಾಗರ: ‘ಕಾಂತರಾಜ ವರದಿ ಜಾರಿಗೆ ಬಂದರೆ ನಿಜವಾದ ಅರ್ಥದಲ್ಲಿ ಸಾಮಾಜಿಕ ನ್ಯಾಯದ ಸಿದ್ಧಾಂತ ಅನುಷ್ಠಾನಗೊಳ್ಳುತ್ತದೆ. ಆದರೆ, ಈ ವರದಿಯನ್ನು ಜಾರಿಗೊಳಿಸಲು ವಿವಿಧ ಪಕ್ಷಗಳ ಮುಖಂಡರು ವಿರೋಧಿಸುವ ಮೂಲಕ ಹಿಂದುಳಿದ ವರ್ಗಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ’ ಎಂದು ಮಲೆನಾಡು ಭೂರಹಿತರ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಆರೋಪಿಸಿದರು.