<p><strong>ಸಾಗರ:</strong> ‘ಕಾಂತರಾಜ ವರದಿ ಜಾರಿಗೆ ಬಂದರೆ ನಿಜವಾದ ಅರ್ಥದಲ್ಲಿ ಸಾಮಾಜಿಕ ನ್ಯಾಯದ ಸಿದ್ಧಾಂತ ಅನುಷ್ಠಾನಗೊಳ್ಳುತ್ತದೆ. ಆದರೆ, ಈ ವರದಿಯನ್ನು ಜಾರಿಗೊಳಿಸಲು ವಿವಿಧ ಪಕ್ಷಗಳ ಮುಖಂಡರು ವಿರೋಧಿಸುವ ಮೂಲಕ ಹಿಂದುಳಿದ ವರ್ಗಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ’ ಎಂದು ಮಲೆನಾಡು ಭೂರಹಿತರ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಆರೋಪಿಸಿದರು.</p>.<p>‘ಕಾಂತರಾಜ ವರದಿಯ ಅನುಷ್ಠಾನಕ್ಕೆ ವಿರೋಧಿಸುತ್ತಿರುವ ಮುಖಂಡರ ಪಕ್ಷಕ್ಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಸಾಮಾಜಿಕ ನ್ಯಾಯದ ಪ್ರತಿಪಾದಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಬಗ್ಗೆ ಪ್ರತಿದಿನವೂ ಭಾಷಣ ಮಾಡುತ್ತಾರೆ. ಆದರೆ ₹ 165 ಕೋಟಿ ವೆಚ್ಚ ಮಾಡಿ ಸಿದ್ಧಗೊಂಡಿರುವ ಕಾಂತರಾಜ ವರದಿಯನ್ನು ಜಾರಿಗೊಳಿಸಲು ಅವರು ಹಿಂಜರಿಯುತ್ತಿದ್ದಾರೆ’ ಎಂದು ದೂರಿದರು.</p>.<p>‘ಕಾಂತರಾಜ ವರದಿಯನ್ನು ಜಾರಿಗೆ ತರದಂತೆ ಹಲವು ಪ್ರಮುಖ ಸಮುದಾಯಗಳ ಮುಖಂಡರು ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತರುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ವರದಿ ಜಾರಿಗೆ ಹಿಂದೇಟು ಹಾಕುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಕೂಡಲೆ ಕಾಂತರಾಜ ವರದಿ ಜಾರಿಗೊಳ್ಳದಿದ್ದರೆ ಹಿಂದುಳಿದ ಸಮುದಾಯದ ಎಲ್ಲರೂ ಒಟ್ಟಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.</p>.<p>ಪ್ರಮುಖರಾದ ಅಮೃತ್ ರಾಸ್, ಸೈಯದ್ ನೂರುಲ್ಲಾ ಹಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಕಾಂತರಾಜ ವರದಿ ಜಾರಿಗೆ ಬಂದರೆ ನಿಜವಾದ ಅರ್ಥದಲ್ಲಿ ಸಾಮಾಜಿಕ ನ್ಯಾಯದ ಸಿದ್ಧಾಂತ ಅನುಷ್ಠಾನಗೊಳ್ಳುತ್ತದೆ. ಆದರೆ, ಈ ವರದಿಯನ್ನು ಜಾರಿಗೊಳಿಸಲು ವಿವಿಧ ಪಕ್ಷಗಳ ಮುಖಂಡರು ವಿರೋಧಿಸುವ ಮೂಲಕ ಹಿಂದುಳಿದ ವರ್ಗಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ’ ಎಂದು ಮಲೆನಾಡು ಭೂರಹಿತರ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಆರೋಪಿಸಿದರು.</p>.<p>‘ಕಾಂತರಾಜ ವರದಿಯ ಅನುಷ್ಠಾನಕ್ಕೆ ವಿರೋಧಿಸುತ್ತಿರುವ ಮುಖಂಡರ ಪಕ್ಷಕ್ಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಸಾಮಾಜಿಕ ನ್ಯಾಯದ ಪ್ರತಿಪಾದಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಬಗ್ಗೆ ಪ್ರತಿದಿನವೂ ಭಾಷಣ ಮಾಡುತ್ತಾರೆ. ಆದರೆ ₹ 165 ಕೋಟಿ ವೆಚ್ಚ ಮಾಡಿ ಸಿದ್ಧಗೊಂಡಿರುವ ಕಾಂತರಾಜ ವರದಿಯನ್ನು ಜಾರಿಗೊಳಿಸಲು ಅವರು ಹಿಂಜರಿಯುತ್ತಿದ್ದಾರೆ’ ಎಂದು ದೂರಿದರು.</p>.<p>‘ಕಾಂತರಾಜ ವರದಿಯನ್ನು ಜಾರಿಗೆ ತರದಂತೆ ಹಲವು ಪ್ರಮುಖ ಸಮುದಾಯಗಳ ಮುಖಂಡರು ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತರುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ವರದಿ ಜಾರಿಗೆ ಹಿಂದೇಟು ಹಾಕುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಕೂಡಲೆ ಕಾಂತರಾಜ ವರದಿ ಜಾರಿಗೊಳ್ಳದಿದ್ದರೆ ಹಿಂದುಳಿದ ಸಮುದಾಯದ ಎಲ್ಲರೂ ಒಟ್ಟಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.</p>.<p>ಪ್ರಮುಖರಾದ ಅಮೃತ್ ರಾಸ್, ಸೈಯದ್ ನೂರುಲ್ಲಾ ಹಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>