ಮುಖ್ಯಮಂತ್ರಿ ತವರು ಜಿಲ್ಲೆಯನ್ನೇ ಕೊರೊನಾ ಆವರಿಸಿಕೊಂಡಿದೆ. ನಿತ್ಯವೂ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಯಾವ ಆಸ್ಪತ್ರೆಗಳಲ್ಲೂ ಸೂಕ್ತಸೌಲಭ್ಯಗಳಿಲ್ಲ. ಜಿಲ್ಲೆಯ48 ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಸೌಲಭ್ಯಗಳ ಕೊರತೆ ಕಾರಣ ಎಂದು ಒಕ್ಕೂಟದ ಕೆ.ಪಿ.ಶ್ರೀಪಾಲ್, ಕೆ.ಟಿ.ಗಂಗಾಧರ್, ಎಂ.ಗುರುಮೂರ್ತಿ, ಚಾರ್ವಕ ರಾಘು, ಶಶಿ ಸಂಪಳ್ಳಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.