ಪದವೀಧರರ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ನಮ್ಮ ಪರ ನಿಲ್ಲಲಿಲ್ಲ.ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಹಿಂದೆ ಸರಿದಿದ್ದಾರೆ.ಕೋವಿಡ್ ಕಾರಣಕ್ಕೆ ಈ ಬಾರಿ ಕಾಲೇಜುಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ತರಗತಿ ಆರಂಭ ಅಸ್ಪಷ್ಟವಾಗಿದೆ. ವಿಶ್ವವಿದ್ಯಾಲಯದಲ್ಲಿಆನ್ಲೈನ್ ತರಗತಿಗೆ ಅತಿಥಿ ಉಪನ್ಯಾಸಕರನ್ನು ಬಳಸಿ ಕೊಳ್ಳಲಾಗಿದೆ. ಆದರೆ, ಕಾಲೇಜು ಶಿಕ್ಷಣ ಇಲಾಖೆ ಅತಿಥಿ 2020-21ನೇ ಸಾಲಿಗೆ ನೇಮಕವೇ ಮಾಡಿಕೊಂಡಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.