ಶತಮಾನದ ಪರಿಷತ್ತಿನಲ್ಲಿ ಮಹಿಳೆಗೆ ಅವಕಾಶ ದೊರಕದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಕನ್ನಡ ಸಾಹಿತ್ಯ ಪರಿಷತ್ತು ಮಹಿಳೆಯರನ್ನು ದೂರ ಇಡುತ್ತಿದೆ ಎನ್ನುವ ಆರೋಪಕ್ಕೆ ಇದು ಸಾಕ್ಷಿ. ತಾವು ಮಹಿಳೆ ಎಂಬ ಕಾರಣಕ್ಕೆ ಸ್ಪರ್ಧಿಸುತ್ತಿಲ್ಲ. ಸಾಹಿತ್ಯ, ರಂಗಕ್ಷೇತ್ರದಲ್ಲೂ ಕೃಷಿ ಮಾಡಿರುವೆ. ಸಾಮಾಜಿಕ ಸೇವೆ, ಶೋಷಿತರ ಪರ ಹೋರಾಟ, ಮಾನವೀಯ ಕಾಳಜಿಗಳನ್ನು ಮೈಗೂಡಿಸಿಕೊಂಡಿರುವೆ. ಹಲವು ವರ್ಷಗಳಿಂದ ನಿರಂತರವಾಗಿ ಸಾಹಿತ್ಯ ಸೇವೆ ಮಾಡಿಕೊಂಡು ಬಂದಿರುವೆ. ಸಂಘಟಿಯಾಗಿ, ಲೇಖಕಿಯಾಗಿ, ಕಲಾವಿದೆಯಾಗಿಯೂ ಕೆಲಸ ಮಾಡಿದ್ದೇನೆ ಎಂದು ವಿವರ ನೀಡಿದರು.