<p><strong>ಶಿವಮೊಗ್ಗ: </strong>ಹಾಸ್ಟೆಲ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಮನವಿ ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿಗಳಿಗೆಜಾತಿ ನಿಂದನೆ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಅವರನ್ನು ಬಂಧಿಸಬೇಕು. ಸೇವೆಯಿಂದ ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ಒತ್ತಾಯಿಸಿದರು.</p>.<p>ಎಲ್ಲಾ ವಿದ್ಯಾರ್ಥಿಗಳನ್ನೂ ಒಂದೇ ರೀತಿ ನೋಡಬೇಕು.ಜಾತಿನಿಂದನೆ ಬಂಜಾರ ಸಮಾಜಕ್ಕೆ ಮಾಡಿದ ಅವಮಾನ.ಕುಲಸಚಿವರು ಬಹಿರಂಗವಾಗಿ ಕ್ಷಮೆಯಾಚಿಸಬೇಕುಎಂಬ ಮನವಿಗೆ ಸ್ಪಂದಿಸದ ಕಾರಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಂಜಾರ ಸಮಾಜದ ಗುರುಗಳ ನೇತೃತ್ವದಲ್ಲಿರಾಜ್ಯದ ಎಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಡಿ.ಆರ್.ಗಿರೀಶ್ಮಾಹಿತಿ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘಟನೆ ಮುಖಂಡರಾದ ವೆಂಕಟೇಶ್, ಉಮಾಮಹೇಶ್ವರ್ ನಾಯ್ಕ, ಮಂಜಾನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಹಾಸ್ಟೆಲ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಮನವಿ ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿಗಳಿಗೆಜಾತಿ ನಿಂದನೆ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಅವರನ್ನು ಬಂಧಿಸಬೇಕು. ಸೇವೆಯಿಂದ ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ಒತ್ತಾಯಿಸಿದರು.</p>.<p>ಎಲ್ಲಾ ವಿದ್ಯಾರ್ಥಿಗಳನ್ನೂ ಒಂದೇ ರೀತಿ ನೋಡಬೇಕು.ಜಾತಿನಿಂದನೆ ಬಂಜಾರ ಸಮಾಜಕ್ಕೆ ಮಾಡಿದ ಅವಮಾನ.ಕುಲಸಚಿವರು ಬಹಿರಂಗವಾಗಿ ಕ್ಷಮೆಯಾಚಿಸಬೇಕುಎಂಬ ಮನವಿಗೆ ಸ್ಪಂದಿಸದ ಕಾರಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಬಂಜಾರ ಸಮಾಜದ ಗುರುಗಳ ನೇತೃತ್ವದಲ್ಲಿರಾಜ್ಯದ ಎಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಡಿ.ಆರ್.ಗಿರೀಶ್ಮಾಹಿತಿ ನೀಡಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘಟನೆ ಮುಖಂಡರಾದ ವೆಂಕಟೇಶ್, ಉಮಾಮಹೇಶ್ವರ್ ನಾಯ್ಕ, ಮಂಜಾನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>