‘ಸದಾಶಿವ ಆಯೋಗದ ವರದಿಯನ್ನು ಬೆಂಬಲಿಸಿದ್ದು ಕೂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವರದಿಯ ಶಿಫಾರಸ್ಸುಗಳನ್ನು ತಿರಸ್ಕರಿಸುತ್ತದೆ ಎನ್ನುವ ಭರವಸೆಯಿಂದ ವಡ್ಡಾ ಭೋವಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ರಾಜ್ಯದಾದ್ಯಂತ ಬೆಂಬಲಿಸಿದ್ದಾರೆ. ಈ ಕಾರಣದಿಂದ ಸರ್ಕಾರ ಸಮುದಾಯದ ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.