<p>ಶಿವಮೊಗ್ಗ: ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ನ ಸಂಸ್ಥಾಪನ ದಶಮಾನೋತ್ಸವ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣವು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೆಸ್ ಸಭಾಂಗಣದಲ್ಲಿ ಏ.26 ಮತ್ತು 27ರಂದು ನಡೆಯಲಿದೆ ಎಂದು ಫೇಡರೇಷನ್ನ ಶಿವಮೊಗ್ಗ ಪ್ರಾಂತ್ಯದ ಪ್ರಮುಖ ಎಸ್.ದತ್ತಾತ್ರಿ ಹೇಳಿದರು.</p>.<p>ಕಾರ್ಯಕ್ರಮವನ್ನು ಸಂಸದ ತೇಜಸ್ವಿ ಸೂರ್ಯ ದಂಪತಿ ಉದ್ಘಾಟಿಸುವರು. ಅರಳುಮಲ್ಲಿಗೆ ಪಾರ್ಥಸಾರಥಿ ನೇತೃತ್ವ ವಹಿಸಲಿದ್ದಾರೆ. ಅಂದು ಸಂಜೆ 5.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ ಚಕ್ರಾಬ್ಜ ಮಂಡಲಪೂಜೆ ನಡೆಯಲಿದೆ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಏ.27ರಂದು ಶಾಲಾ ವಿದ್ಯಾರ್ಥಿಗಳಿಂದ ವಿಷ್ಣು ಸಹಸ್ರನಾಮ ಪಾರಾಯಣ, ಹೋಮ, ವೈದ್ಯಕೀಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಅಖಿಲ ಭಾರತ ವಿಷ್ಣು ಸಹಸ್ರನಾಮ ಸಮ್ಮೇಳನ ಆರಂಭವಾಗಲಿದೆ. ನಂತರ ವಿಷ್ಣು ಸಹಸ್ರನಾಮ ದೀಕ್ಷಾ ಮಹೋತ್ಸವ ನಡೆಯಲಿದೆ ಎಂದರು.</p>.<p>ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ ತೆರಳುವ 100 ಜನರಿಗೆ ಉಚಿತ ಬಸ್, ವಸತಿ, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಮೊದಲು ಹೆಸರು ನೋಂದಾಯಿಸದವರಿಗೆ ಆದ್ಯತೆ. ಆಸಕ್ತರು ಮೊ.9964072793 ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಶ್ರೀರಂಜಿನಿ ದತ್ತಾತ್ರಿ, ರಾಮಾಚಾರ್ ಜೋಯಿಸ್, ಶಶಿಕಾಂತ್ ನಾಡಿಗ್, ಎನ್.ಶ್ರೀಧರ್, ಕುಮಾರಶಾಸ್ತ್ರಿ, ಶಬರೀಶ್ ಕಣ್ಣನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ನ ಸಂಸ್ಥಾಪನ ದಶಮಾನೋತ್ಸವ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣವು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೆಸ್ ಸಭಾಂಗಣದಲ್ಲಿ ಏ.26 ಮತ್ತು 27ರಂದು ನಡೆಯಲಿದೆ ಎಂದು ಫೇಡರೇಷನ್ನ ಶಿವಮೊಗ್ಗ ಪ್ರಾಂತ್ಯದ ಪ್ರಮುಖ ಎಸ್.ದತ್ತಾತ್ರಿ ಹೇಳಿದರು.</p>.<p>ಕಾರ್ಯಕ್ರಮವನ್ನು ಸಂಸದ ತೇಜಸ್ವಿ ಸೂರ್ಯ ದಂಪತಿ ಉದ್ಘಾಟಿಸುವರು. ಅರಳುಮಲ್ಲಿಗೆ ಪಾರ್ಥಸಾರಥಿ ನೇತೃತ್ವ ವಹಿಸಲಿದ್ದಾರೆ. ಅಂದು ಸಂಜೆ 5.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ ಚಕ್ರಾಬ್ಜ ಮಂಡಲಪೂಜೆ ನಡೆಯಲಿದೆ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಏ.27ರಂದು ಶಾಲಾ ವಿದ್ಯಾರ್ಥಿಗಳಿಂದ ವಿಷ್ಣು ಸಹಸ್ರನಾಮ ಪಾರಾಯಣ, ಹೋಮ, ವೈದ್ಯಕೀಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಅಖಿಲ ಭಾರತ ವಿಷ್ಣು ಸಹಸ್ರನಾಮ ಸಮ್ಮೇಳನ ಆರಂಭವಾಗಲಿದೆ. ನಂತರ ವಿಷ್ಣು ಸಹಸ್ರನಾಮ ದೀಕ್ಷಾ ಮಹೋತ್ಸವ ನಡೆಯಲಿದೆ ಎಂದರು.</p>.<p>ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ ತೆರಳುವ 100 ಜನರಿಗೆ ಉಚಿತ ಬಸ್, ವಸತಿ, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಮೊದಲು ಹೆಸರು ನೋಂದಾಯಿಸದವರಿಗೆ ಆದ್ಯತೆ. ಆಸಕ್ತರು ಮೊ.9964072793 ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಶ್ರೀರಂಜಿನಿ ದತ್ತಾತ್ರಿ, ರಾಮಾಚಾರ್ ಜೋಯಿಸ್, ಶಶಿಕಾಂತ್ ನಾಡಿಗ್, ಎನ್.ಶ್ರೀಧರ್, ಕುಮಾರಶಾಸ್ತ್ರಿ, ಶಬರೀಶ್ ಕಣ್ಣನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>