<p><strong>ಶಿವಮೊಗ್ಗ: ‘</strong>ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ನೀಡಿರುವ ಮೀಸಲಾತಿ ಮಿತಿ ₹ 2 ಕೋಟಿವರೆಗೆ ಹೆಚ್ಚಿಸಬೇಕು’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್.ಮಹಾದೇವ ಸ್ವಾಮಿ ಆಗ್ರಹಿಸಿದರು.</p>.<p>ಈ ಮೊದಲು ₹ 1 ಕೋಟಿವರೆಗೆ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಮೀಸಲಾತಿ ಮಿತಿ ₹ 2 ಕೋಟಿವರೆಗೆ ಹೆಚ್ಚಿಸುವುದಾಗಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆದ್ದರಿಂದ ಮುಂದಿನ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕು. ಇದರಿಂದ ರಾಜ್ಯದಾದ್ಯಂತ ಸುಮಾರು 15,000 ಗುತ್ತಿಗೆದಾರರು ಈ ಸೌಲಭ್ಯ ಪಡೆದುಕೊಳ್ಳಲಿದ್ದಾರೆ. ಎಸ್ಸಿ, ಎಸ್ಟಿ ಗುತ್ತಿಗೆದಾರರು ಇ–ಟೆಂಡರ್ನಲ್ಲಿ ಭಾಗವಹಿಸಲು ಲೈನ್ ಆಫ್ ಕ್ರೆಡಿಟ್ ಪಡೆಯುವುದು ಅವಶ್ಯಕ ಎಂಬುದನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>2018ರಿಂದ ಈಚೆಗೆ ಇದ್ದ ಗುತ್ತಿಗೆದಾರರಿಗೆ ಪರವಾನಗಿ ನೀಡಬೇಕು ಹಾಗೂ ನವೀಕರಣಗೊಳಿಸಬೇಕು. ಕೆಆರ್ಐಡಿಎಲ್ಗೆ 4ಜಿ ವಿನಾಯಿತಿ ರದ್ದುಗೊಳಿಸಿ ಸಾಮಾನ್ಯ ಗುತ್ತಿಗೆದಾರರಂತೆ ಇ– ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಶಿವಕುಮಾರ್, ಕಾರ್ಯದರ್ಶಿ ಕೆ.ಲೋಕೇಶ್, ಖಜಾಂಚಿ ಚಂದ್ರಶೇಖರ್ ಖಾನ್ ಪೇಟ್, ಪ್ರಮುಖರಾದ ಚಂದ್ರಪ್ಪ, ಎಸ್.ಟಿ.ರವಿ, ಪರಮೇಶ್ವರ ನಾಯಕ್, ಜಿ.ವಿ.ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ‘</strong>ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ನೀಡಿರುವ ಮೀಸಲಾತಿ ಮಿತಿ ₹ 2 ಕೋಟಿವರೆಗೆ ಹೆಚ್ಚಿಸಬೇಕು’ ಎಂದು ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್.ಮಹಾದೇವ ಸ್ವಾಮಿ ಆಗ್ರಹಿಸಿದರು.</p>.<p>ಈ ಮೊದಲು ₹ 1 ಕೋಟಿವರೆಗೆ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರವಾಗಿ ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಮೀಸಲಾತಿ ಮಿತಿ ₹ 2 ಕೋಟಿವರೆಗೆ ಹೆಚ್ಚಿಸುವುದಾಗಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಆದ್ದರಿಂದ ಮುಂದಿನ ಅಧಿವೇಶನದಲ್ಲಿ ಬಿಲ್ ಮಂಡಿಸಬೇಕು. ಇದರಿಂದ ರಾಜ್ಯದಾದ್ಯಂತ ಸುಮಾರು 15,000 ಗುತ್ತಿಗೆದಾರರು ಈ ಸೌಲಭ್ಯ ಪಡೆದುಕೊಳ್ಳಲಿದ್ದಾರೆ. ಎಸ್ಸಿ, ಎಸ್ಟಿ ಗುತ್ತಿಗೆದಾರರು ಇ–ಟೆಂಡರ್ನಲ್ಲಿ ಭಾಗವಹಿಸಲು ಲೈನ್ ಆಫ್ ಕ್ರೆಡಿಟ್ ಪಡೆಯುವುದು ಅವಶ್ಯಕ ಎಂಬುದನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.</p>.<p>2018ರಿಂದ ಈಚೆಗೆ ಇದ್ದ ಗುತ್ತಿಗೆದಾರರಿಗೆ ಪರವಾನಗಿ ನೀಡಬೇಕು ಹಾಗೂ ನವೀಕರಣಗೊಳಿಸಬೇಕು. ಕೆಆರ್ಐಡಿಎಲ್ಗೆ 4ಜಿ ವಿನಾಯಿತಿ ರದ್ದುಗೊಳಿಸಿ ಸಾಮಾನ್ಯ ಗುತ್ತಿಗೆದಾರರಂತೆ ಇ– ಟೆಂಡರ್ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಶಿವಕುಮಾರ್, ಕಾರ್ಯದರ್ಶಿ ಕೆ.ಲೋಕೇಶ್, ಖಜಾಂಚಿ ಚಂದ್ರಶೇಖರ್ ಖಾನ್ ಪೇಟ್, ಪ್ರಮುಖರಾದ ಚಂದ್ರಪ್ಪ, ಎಸ್.ಟಿ.ರವಿ, ಪರಮೇಶ್ವರ ನಾಯಕ್, ಜಿ.ವಿ.ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>