ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ: ಕೇಂದ್ರದ ವಿರುದ್ಧ ಪ್ರತಿಭಟನೆ

ಪ್ರಧಾನಿ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು, ಸೌದೆ ಒಲೆ ಹಚ್ಚಿ ಕಾಂಗ್ರೆಸ್‌ ಪ್ರತಿಭಟನೆ
Last Updated 10 ಏಪ್ರಿಲ್ 2022, 5:53 IST
ಅಕ್ಷರ ಗಾತ್ರ

ಶಿವಮೊಗ್ಗ: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ನಗರದ ಮಹಾವೀರ ವೃತ್ತದಲ್ಲಿ ಶನಿವಾರಪ್ರತಿಭಟನೆ ನಡೆಸಲಾಯಿತು.

ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಮಸಿ ಬಳಿದು, ಸೌದೆ ಒಲೆ ಹಚ್ಚುವ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ‘ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿತ್ಯವೂ ಏರುತ್ತಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿ, ದೇಶದ ಜನರಿಗೆ ಬರೆ ಹಾಕಲಾಗುತ್ತಿದೆ. ಇದೇ ಬಿಜೆಪಿ ಅವರು ಹೇಳಿದ ಅಚ್ಛೇದಿನ್‌ ಇರಬೇಕು’ ಎಂದು ಲೇವಡಿ ಮಾಡಿದರು.

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡುತ್ತಾ ಕೋವಿಡ್ ಸಂಕಷ್ಟದಲ್ಲಿರುವ ಜನರನ್ನು ತೆರಿಗೆ ನೆಪದಲ್ಲಿ ಮತ್ತಷ್ಟು ಕಂಗಾಲಾಗುವಂತೆ ಮಾಡಿದ್ದಾರೆ. ಈಗಾಗಲೇ ರೈತ, ಕಾರ್ಮಿಕ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ. ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ.ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಮಾರ್ಟಿನ್, ಚಂದ್ರಕಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT