ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಭದ್ರಾವತಿ ಇರ್ಫಾನ್ (30) ಮೃತ ಕೈದಿ. ಹಲವು ಅಪರಾಧ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದ ಇರ್ಫಾನ್ ಗುರುವಾರ ಬೆಳಗಿನ ಜಾವ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಆರಂಭಕ್ಕೂ ಮೊದಲೇ ಕೊನೆಯುಸಿರು ಎಳೆದಿದ್ದಾರೆ.
‘ಆರೋಗ್ಯವಾಗಿದ್ದ ಇರ್ಫಾನ್ ಸಾವು ಅನುಮಾನ ಮೂಡಿಸಿದೆ. ಈ ಕುರಿತು ತನಿಖೆ ನಡೆಸಬೇಕು’ ಎಂದು ಕುಟುಂದ ಸದಸ್ಯರು ಒತ್ತಾಯಿಸಿದ್ದಾರೆ.
ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ದೇಹದ ಮೇಲೆ ಬೇರೆ ಯಾವುದೇಗುರುತುಗಳುಲಭ್ಯವಾಗಿಲ್ಲ ಎಂದು ಪೊಲೀಸರು, ಆಸ್ಪತ್ರೆಯ ಮೂಲಗಳು ತಿಳಿಸಿವೆ.