<p>ಹೊಸನಗರ: ಇಲ್ಲಿನ ನೂಲಿಗ್ಗೇರಿ ಅರಣ್ಯ ಇಲಾಖೆಯ ಕ್ವಾರ್ಟರ್ಸ್ ಬಳಿ ಶುಕ್ರವಾರ ಬಲೆಯೊಳಗೆ ಸಿಲುಕಿದ್ದ ನಾಗರಹಾವನ್ನು ಸುರಕ್ಷಿತವಾಗಿ ಬಿಡಿಸಿ ಕಾಡಿಗೆ ಬಿಡಲಾಯಿತು.</p>.<p>ಅರಣ್ಯ ಇಲಾಖೆಯ ಜೀಪ್ ಚಾಲಕ ರಾಮು ಅವರ ಮನೆಯ ಬೇಲಿಗೆ ಬಲೆ ಹಾಕಿದ್ದರು. ನಾಗರಹಾವು ಬಲೆಯೊಳಗೆ ಸಿಲುಕಿ ಒದ್ದಾಡುತ್ತಿತ್ತು. ಅದನ್ನು ಕಂಡ ಅವರು ಉರಗ ತಜ್ಞ ನಾರಾಯಣ ಕಾಮತ್ ಅವರಿಗೆ ಮಾಹಿತಿ ನೀಡಿದರು.</p>.<p>ಕೆಲಹೊತ್ತಿನ ಕಾರ್ಯಾಚರಣೆ ನಡೆಸಿದ ನಾರಾಯಣ ಕಾಮತ್ ಹಾವಿಗೆ ಯಾವುದೇ ಅಪಾಯವಾಗದಂತೆ ಎಚ್ಚರಿಕೆಯಿಂದ ಬಲೆಯಿಂದ ಬಿಡಿಸಿ ಸಮೀಪದ ಕಾಡಿಗೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ಇಲ್ಲಿನ ನೂಲಿಗ್ಗೇರಿ ಅರಣ್ಯ ಇಲಾಖೆಯ ಕ್ವಾರ್ಟರ್ಸ್ ಬಳಿ ಶುಕ್ರವಾರ ಬಲೆಯೊಳಗೆ ಸಿಲುಕಿದ್ದ ನಾಗರಹಾವನ್ನು ಸುರಕ್ಷಿತವಾಗಿ ಬಿಡಿಸಿ ಕಾಡಿಗೆ ಬಿಡಲಾಯಿತು.</p>.<p>ಅರಣ್ಯ ಇಲಾಖೆಯ ಜೀಪ್ ಚಾಲಕ ರಾಮು ಅವರ ಮನೆಯ ಬೇಲಿಗೆ ಬಲೆ ಹಾಕಿದ್ದರು. ನಾಗರಹಾವು ಬಲೆಯೊಳಗೆ ಸಿಲುಕಿ ಒದ್ದಾಡುತ್ತಿತ್ತು. ಅದನ್ನು ಕಂಡ ಅವರು ಉರಗ ತಜ್ಞ ನಾರಾಯಣ ಕಾಮತ್ ಅವರಿಗೆ ಮಾಹಿತಿ ನೀಡಿದರು.</p>.<p>ಕೆಲಹೊತ್ತಿನ ಕಾರ್ಯಾಚರಣೆ ನಡೆಸಿದ ನಾರಾಯಣ ಕಾಮತ್ ಹಾವಿಗೆ ಯಾವುದೇ ಅಪಾಯವಾಗದಂತೆ ಎಚ್ಚರಿಕೆಯಿಂದ ಬಲೆಯಿಂದ ಬಿಡಿಸಿ ಸಮೀಪದ ಕಾಡಿಗೆ ಬಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>